Thursday, August 7, 2008

ಶ್ರಾವಣ ಮಾಸ ಬಂದಾಗ ಆನಂದ ತಂದಾಗ

ಚಿತ್ರ: ಶ್ರಾವಣ ಬಂತು
ರಚನೆ: ಚಿ.ಉದಯಶಂಕರ್
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್ ಮತ್ತು ವಾಣಿ ಜಯರಾಮ್


ಶ್ರಾವಣ ಮಾಸ ಬಂದಾಗ ಆನಂದ ತಂದಾಗ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ

ನೀ ನನ್ನ ಜೊತೆಯಾಗಿ ಇರುವಾಗ ಹಿತವಾಗಿ
ಬಿಸಿಲೆಲ್ಲ ತಂಪಾಗಿ ಬೆಳದಿಂಗಳಂತಾಗಿ
ಮಾತೆಲ್ಲ ಹಾಡಾಗಿ ಆ ಹಾಡು ಇಂಪಾಗಿ
ಯುಗವೊಂದು ದಿನವಾಗಿ ಕ್ಷಣವಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ

ಶ್ರಾವಣ ಮಾಸ ಬಂದಾಗ ಆನಂದ ತಂದಾಗ...

ಮುಗಿಲೆಲ್ಲ ಕಪ್ಪಾಗಿ ಮಿಂಚಿಂದ ಬೆಳಕಾಗಿ
ಗುಡುಗಿಂದ ಸದ್ದಾಗಿ ಮಳೆಬಂದು ತಂಪಾಗಿ
ಸಂತೋಷ ಹೆಚ್ಚಾಗಿ ನವಿಲೊಂದು ಹುಚ್ಚಾಗಿ
ಕುಣಿದಾಗ ಸೊಗಸಾಗಿ ನಮಗಾಗ ಚಳಿಯಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ

ಶ್ರಾವಣ ಮಾಸ ಬಂದಾಗ ಆನಂದ ತಂದಾಗ...

1 comment:

MANJU said...

thanks 4 uploading the songs