Sunday, September 7, 2008

ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ

ರಚನೆ: ಎನ್.ಎಸ್.ಲಕ್ಷ್ಮಿನಾರಾಯಣ ಭಟ್ಟ
ಸ೦ಗೀತ: ಮೈಸೂರು ಅನಂತಸ್ವಾಮಿ
ಹಿನ್ನಲೆ ಗಾಯನ: ಪಲ್ಲವಿ ಅರುಣ್



ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ
ನಾ ತಾಳಲಾರೆ ಈ ವಿರಹ ಕೃಷ್ಣ
ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ

ಕಮಲವಿಲ್ಲದ ಕೆರೆ ನನ್ನ ಬಾಳು
ಚ೦ದ್ರ ಇಲ್ಲದ ರಾತ್ರಿ ಬೀಳು
ಕಮಲವಿಲ್ಲದ ಕೆರೆ ನನ್ನ ಬಾಳು
ಚ೦ದ್ರನಿಲ್ಲದ ರಾತ್ರಿ ಬೀಳು
ನೀ ಸಿಗದೆ ಉರಿ ಉರಿ ಕಳೆದೆ ಇರುಳ
ಮಾತಿಲ್ಲ ಬಿಗಿದಿದೆ ದುಃಖ ಕೊರಳ

ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ...

ಅನ್ನ ಸೇರದು ನಿದ್ದೆ ಬ೦ದುದೆ೦ದು
ಕುದಿವೆ ಒ೦ದೇ ಸಮ ಕೃಷ್ಣಾ ಎ೦ದು
ಅನ್ನ ಸೇರದು ನಿದ್ದೆ ಬ೦ದುದೆ೦ದು
ಕುದಿವೆ ಒ೦ದೇ ಸಮ ಕೃಷ್ಣಾ ಎ೦ದು
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ

ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ...

ಒಳಗಿರುವ ಗಿರಿಧರನೆ ಹೊರಗೆ ಬಾರೋ
ಕಣ್ಣೆದುರು ನಿ೦ತು ಆ ರೂಪ ತೋರೋ
ಒಳಗಿರುವ ಗಿರಿಧರನೆ ಹೊರಗೆ ಬಾರೋ
ಕಣ್ಣೆದುರು ನಿ೦ತು ಆ ರೂಪ ತೋರೋ
ಜನುಮ ಜನುಮದಾ ರಾಗ ನನ್ನ ಪ್ರೀತಿ
ಕೃಷ್ಣಾ... ಕೃಷ್ಣಾ... ಕೃಷ್ಣಾ... ಕೃಷ್ಣಾ...
ಜನುಮ ಜನುಮದಾ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೆ ಅದರ ರೀತಿ

ನೀ ಸಿಗದೆ ಬಾಳೊ೦ದು ಬಾಳೇ ಕೃಷ್ಣ...

5 comments:

kanasu said...

I think you are doing a grt job! Thanks..

Girija said...

dear yajnesh, came to know about namma sangraha from PG Bhat. i will be a regular hence forth. Anda haage, nee sigade haadu HSV yavaraddu andkondidde....

Girija Hegde

Unknown said...

JANUMA JANUMADA RADHA NANNA PRITHI THIS LINE CORRECT IT.

CHANDRA ILLADA RATRIYA BIDU
THIS LINE IS ALSO MISTAKE.

Anonymous said...

"Nanu badavi aata badava olave namma baduku...." haadina saahitya sikkidre post madtiraa plzzz..

Anonymous said...

Nimma blogna sangraha thumba adbuthavagidhe. heege sadhakala kannada sahithya abhiruchiyu ellaralliyu irali.