ಸಾಹಿತ್ಯ: ಹೆಚ್.ಎಸ್.ವೆಂಕಟೇಶ ಮೂರ್ತಿ
ಹಿನ್ನಲೆ ಗಾಯನ: ಬಿ.ಆರ್.ಛಾಯ
ಹುಚ್ಚು ಕೋಡಿ ಮನಸು ಅದು ಹದಿನಾರರ ವಯಸು
ಹುಚ್ಚು ಕೋಡಿ ಮನಸು ಅದು ಹದಿನಾರರ ವಯಸು
ಮಾತು ಮಾತಿಗೇಕೋ ನಗು ಮರುಗಳಿಗೆ ಮೌನ
ಕನ್ನಡಿ ಮುಂದಷ್ಟು ಹೊತ್ತು ಬರೆಯದಿರುವ ಕವನ
ಹುಚ್ಚು ಕೋಡಿ ಮನಸು ಅದು ಹದಿನಾರರ ವಯಸು
ಸೆರಗು ತೀಡಿದಷ್ಟುಹೊತ್ತು ಹಟಮಾಡುವ ಕೂದಲು
ಸೆರಗು ತೀಡಿದಷ್ಟುಹೊತ್ತು ಹಟಮಾಡುವ ಕೂದಲು
ನಿರಿಯೇಕೋ ಸರಿಯಾಗದು ಮತ್ತೆ ಒಳಗೆ ಹೋದಳು
ನಿರಿಯೇಕೋ ಸರಿಯಾಗದು ಮತ್ತೆ ಒಳಗೆ ಹೋದಳು
ಹುಚ್ಚು ಕೋಡಿ ಮನಸು ಅದು ಹದಿನಾರರ ವಯಸು
ಕೆನ್ನೆ ಕೊಂಚ ಕೆಂಪಾಯಿತೆ ತುಟಿಯ ರಂಗು ಹೆಚ್ಚೇ
ಕೆನ್ನೆ ಕೊಂಚ ಕೆಂಪಾಯಿತೆ ತುಟಿಯ ರಂಗು ಹೆಚ್ಚೇ
ನಗುತ ಅವಳ ಅಣುಕಿಸುತಿದೆ ಗಲ್ಲದ ಕರಿ ಮಚ್ಚೆ
ಹುಚ್ಚು ಕೋಡಿ ಮನಸು ಅದು ಹದಿನಾರರ ವಯಸು
ಬರಿ ಹಸಿರು ಬರಿ ಹೂವು ಎದೆಯೊಳೆಷ್ಟು ಹೆಸರು
ಯಾವ ಮದುವೆ ದಿಬ್ಬಣವೋ ಸುಮ್ಮನೆ ನಿಟ್ಟುಸಿರು
ಹುಚ್ಚು ಕೋಡಿ ಮನಸು ಅದು ಹದಿನಾರರ ವಯಸು
ಇದನ್ನು ಕಳಿಸಿದ ಸೌಮ್ಯ ಅವರಿಗೆ ಧನ್ಯವಾದಗಳು. ಇದರ ಸಾಹಿತ್ಯ, ಸಂಗೀತ, ಹಿನ್ನಲೆಗಾಯಕರ ಮಾಹಿತಿಯಿದ್ದರೆ ಕಳಿಸಿಕೊಡಿ
Tuesday, July 1, 2008
Sunday, June 29, 2008
ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ
ಸಾಹಿತ್ಯ: ಎಂ.ಎನ್.ವ್ಯಾಸರಾವ್
ಸಂಗೀತ: ಸಿ.ಅಶ್ವತ್ಥ್
ಹಿನ್ನಲೆ ಗಾಯನ: ರತ್ನಮಾಲಾ ಪ್ರಕಾಶ್
ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ
ನನ್ನೆದೆಯ ಕಡಲೇಕೆ ಬೀಗುತಿಹುದು
ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ
ನನ್ನೆದೆಯ ಕಡಲೇಕೆ ಬೀಗುತಿಹುದು
ಸೂಜುಗಲ್ಲಾಗಿರುವೆ ಸೆಳೆದು ನಿನ್ನಯ ಕಡೆಗೆ
ಗರಿಗೆದರೆ ಕನಸುಗಳು ಕಾಡುತಿಹುದು
ಎದೆಗೆ ತಾಪದ ಉಸಿರು ತೀಡಿ ತರುತಿದೆ ಅಲರು
ನಿನ್ನ ಹುಣ್ಣಿಮೆ ನಗೆಯು ಛೇಡಿಸಿಹುದು
ಬಳಿಗೆ ಬಾರದೆ ನಿಂತೆ ಹೃದಯ ತುಂಬಿದೆ ಚಿಂತೆ
ಜೀವ ನಿನ್ನಾಸರೆಗೆ ಕಾಯುತಿಹುದು
ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ....
ನೀನೊಂದು ದಡದಲ್ಲಿ ನಾನೊಂದು ದಡದಲ್ಲಿ
ನಡುವೆ ಮೈಚಾಚಿರುವ ವಿರಹದಡವು
ಯಾವ ದೋಣಿಯು ತೇಲಿ ಎಂದು ಬರುವಿದೊ ಕಾಣೆ
ನೀನಿರುವ ಬಳಿಯಲ್ಲಿ ನನ್ನ ಬಿಡಲು
ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ...
ಸಂಗೀತ: ಸಿ.ಅಶ್ವತ್ಥ್
ಹಿನ್ನಲೆ ಗಾಯನ: ರತ್ನಮಾಲಾ ಪ್ರಕಾಶ್
ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ
ನನ್ನೆದೆಯ ಕಡಲೇಕೆ ಬೀಗುತಿಹುದು
ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ
ನನ್ನೆದೆಯ ಕಡಲೇಕೆ ಬೀಗುತಿಹುದು
ಸೂಜುಗಲ್ಲಾಗಿರುವೆ ಸೆಳೆದು ನಿನ್ನಯ ಕಡೆಗೆ
ಗರಿಗೆದರೆ ಕನಸುಗಳು ಕಾಡುತಿಹುದು
ಎದೆಗೆ ತಾಪದ ಉಸಿರು ತೀಡಿ ತರುತಿದೆ ಅಲರು
ನಿನ್ನ ಹುಣ್ಣಿಮೆ ನಗೆಯು ಛೇಡಿಸಿಹುದು
ಬಳಿಗೆ ಬಾರದೆ ನಿಂತೆ ಹೃದಯ ತುಂಬಿದೆ ಚಿಂತೆ
ಜೀವ ನಿನ್ನಾಸರೆಗೆ ಕಾಯುತಿಹುದು
ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ....
ನೀನೊಂದು ದಡದಲ್ಲಿ ನಾನೊಂದು ದಡದಲ್ಲಿ
ನಡುವೆ ಮೈಚಾಚಿರುವ ವಿರಹದಡವು
ಯಾವ ದೋಣಿಯು ತೇಲಿ ಎಂದು ಬರುವಿದೊ ಕಾಣೆ
ನೀನಿರುವ ಬಳಿಯಲ್ಲಿ ನನ್ನ ಬಿಡಲು
ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ...
Labels:
ಎಂ.ಎನ್.ವ್ಯಾಸರಾವ್,
ಭಾವ ಗೀತೆ,
ರತ್ನಮಾಲಾ ಪ್ರಕಾಶ್,
ಸಿ. ಅಶ್ವಥ್
Monday, June 23, 2008
ಬಿಸಿಲಾದರೇನು ಮಳೆಯಾದರೇನು...
ಚಿತ್ರ: ಬೆಂಕಿಯ ಬಲೆ
ರಚನೆ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ
ಬಿಸಿಲಾದರೇನು ಮಳೆಯಾದರೇನು
ಎಂದೂ ನಾನಿಲ್ಲವೇನು
ನೀ ನನ್ನ ಜೀವಾ ಎಂದಿಗೂ
ಹೂವು ಹಾವಾದರೇನು ಹಾಲು ವಿಷವಾದರೇನು
ಹೂವು ಹಾವಾದರೇನು ಹಾಲು ವಿಷವಾದರೇನು
ಈ ನಿನ್ನ ನೋಟ ಬೆರೆತಾಗ ಮುಳ್ಳು
ಹೂವಾಗಿ ಅರಳದೇನು
ಭುವಿಯೇ ಬಾಯ್ಬಿಟ್ಟರೇನು ಸಿಡಿಲೆ ಎದುರಾದರೇನು
ನನ್ನಾಣೆ ನಲ್ಲೆ ನಾ ನಿನ್ನ ಬಿಡೆನು
ಪ್ರಾಣಕ್ಕೆ ಪ್ರಾಣ ಕೊಡುವೆ
ಕಂಬನಿ ಮಿಡಿಯದೇ ಇನ್ನು ನಗಲಾರೆಯೇನು
ಬಿಸಿಲಾದರೇನು ಮಳೆಯಾದರೇನು...
ಸೆಳೆವ ಸುಳಿಯಾದರೇನು ಬೆಂಕಿಯ ಬಲೆಯಾದರೇನು
ಸೆಳೆವ ಸುಳಿಯಾದರೇನು ಬೆಂಕಿಯ ಬಲೆಯಾದರೇನು
ಈ ಬಾಳು ಇನ್ನು ಹೋರಾಟ ತಾನೇ
ಬಿಡು ಇನ್ನು ಚಿಂತೆಯನ್ನು
ಯಾರೇನು ಅಂದರೇನು ಊರೇ ಎದುರಾದರೇನು
ಕೊನೆತನಕ ನಾನು ಹೋರಾಡಿ ಗೆಲುವೆ
ನಿನ್ನನ್ನು ನಾನು ಬಿಡೆನು
ಕೊರಗದೆ ನಡುಗದೆ ನಲ್ಲೆ ನಗಲಾರೆಯೇನು
ಬಿಸಿಲಾದರೇನು ಮಳೆಯಾದರೇನು...
Labels:
ಎಸ್.ಪಿ,
ಚಿತ್ರ ಗೀತೆ,
ಬೆಂಕಿಯ ಬಲೆ,
ರಾಜನ್-ನಾಗೇಂದ್ರ
ಈ ಭಾವಗೀತೆ ನಿನಗಾಗಿ ಹಾಡಿದೆ
ಚಿತ್ರ: ಒಂದೇ ಗುರಿ
ರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ
ಈ ಭಾವಗೀತೆ ನಿನಗಾಗಿ ಹಾಡಿದೆ
ಅನುರಾಗ ನನ್ನನು ಕವಿಯಾಗಿ ಮಾಡಿದೆ
ಈ ಭಾವಗೀತೆ ನಿನಗಾಗಿ ಹಾಡಿದೆ
ಈ ಭಾವಗೀತೆ ನಿನಗಾಗಿ ಹಾಡಿದೆ
ಬಳ್ಳಿಯಲಿ ಹೂವು ತುಂಬಿ ಮರಗಳಲಿ ಜೀವ ತುಂಬಿ
ಎಲ್ಲೆಲ್ಲಿ ನೊಡಿದರಲ್ಲಿ ಹೊಸ ಹಸಿರು ತುಂಬಿದೆ
ಹಾಡುತಿರೆ ದುಂಬಿಗಳೆಲ್ಲ ಹಾರುತಿರೆ ಹಕ್ಕಿಗಳೆಲ್ಲಾ
ತೋಳಿoದ ನನ್ನನು ಬಳಸಿ ನೀ ಸನಿಹ ನಿಂತಿರೇ
ನಿನ ಅಂದ ಕಂಡು ಸಂತೋಷಗೊಂಡು ಹೊಸ ಭಾವ ಮೂಡಲು
ಈ ಭಾವಗೀತೆ ನಿನಗಾಗಿ ...
ಕಣ್ಣಿನಲಿ ರೂಪ ತುಂಬಿ ಮನಸಿನಲಿ ಪ್ರೇಮ ತುಂಬಿ
ನನ್ನೆದೆಯ ವೀಣೆಯ ಮೀಟಿ ಹೊಸ ನಾದ ತುಂಬಿದೆ
ಆಸೆಗಳ ಕಣ್ಣು ತುಂಬಿ ಮೋಹವನು ತುಂಬಿ ತುಂಬಿ
ನೂರಾರು ಕನಸುಗಳನ್ನು ಬಾಳಲ್ಲಿ ತುಂಬಿದೆ
ಹೀಗೇಕೆ ನೀ ಮೌನವಾದೆ ಕಾರಣ ಹೇಳದೇ
ಈ ಭಾವಗೀತೆ ನಿನಗಾಗಿ...
ರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ
ಈ ಭಾವಗೀತೆ ನಿನಗಾಗಿ ಹಾಡಿದೆ
ಅನುರಾಗ ನನ್ನನು ಕವಿಯಾಗಿ ಮಾಡಿದೆ
ಈ ಭಾವಗೀತೆ ನಿನಗಾಗಿ ಹಾಡಿದೆ
ಈ ಭಾವಗೀತೆ ನಿನಗಾಗಿ ಹಾಡಿದೆ
ಬಳ್ಳಿಯಲಿ ಹೂವು ತುಂಬಿ ಮರಗಳಲಿ ಜೀವ ತುಂಬಿ
ಎಲ್ಲೆಲ್ಲಿ ನೊಡಿದರಲ್ಲಿ ಹೊಸ ಹಸಿರು ತುಂಬಿದೆ
ಹಾಡುತಿರೆ ದುಂಬಿಗಳೆಲ್ಲ ಹಾರುತಿರೆ ಹಕ್ಕಿಗಳೆಲ್ಲಾ
ತೋಳಿoದ ನನ್ನನು ಬಳಸಿ ನೀ ಸನಿಹ ನಿಂತಿರೇ
ನಿನ ಅಂದ ಕಂಡು ಸಂತೋಷಗೊಂಡು ಹೊಸ ಭಾವ ಮೂಡಲು
ಈ ಭಾವಗೀತೆ ನಿನಗಾಗಿ ...
ಕಣ್ಣಿನಲಿ ರೂಪ ತುಂಬಿ ಮನಸಿನಲಿ ಪ್ರೇಮ ತುಂಬಿ
ನನ್ನೆದೆಯ ವೀಣೆಯ ಮೀಟಿ ಹೊಸ ನಾದ ತುಂಬಿದೆ
ಆಸೆಗಳ ಕಣ್ಣು ತುಂಬಿ ಮೋಹವನು ತುಂಬಿ ತುಂಬಿ
ನೂರಾರು ಕನಸುಗಳನ್ನು ಬಾಳಲ್ಲಿ ತುಂಬಿದೆ
ಹೀಗೇಕೆ ನೀ ಮೌನವಾದೆ ಕಾರಣ ಹೇಳದೇ
ಈ ಭಾವಗೀತೆ ನಿನಗಾಗಿ...
Labels:
ಎಸ್.ಪಿ,
ಒಂದೇ ಗುರಿ,
ಚಿ.ಉದಯಶಂಕರ್,
ಚಿತ್ರ ಗೀತೆ,
ರಾಜನ್-ನಾಗೇಂದ್ರ
Sunday, July 15, 2007
ಎಲ್ಲಿಗೇ ಪಯಣ ಯಾವುದೋ ದಾರಿ ಏಕಾಂಗಿ ಸಂಚಾರಿ
ಚಿತ್ರ: ಸಿಪಾಯಿ ರಾಮು
ರಚನೆ: ಆರ್.ಎನ್. ಜಯಗೋಪಾಲ್
ಸಂಗೀತ: ಉಪೇಂದ್ರ ಕುಮಾರ್
ಹಿನ್ನಲೆ ಗಾಯನ: ಪಿ.ಬಿ. ಶ್ರೀನಿವಾಸ್
ಕಥೆ ಮುಗಿಯಿತೇ ಆರಂಭದ ಮುನ್ನ
ಲತೆ ಬಾಡಿ ಹೋಯಿತೆ ಹೂವಾಗುವ ಮುನ್ನ
ಎಲ್ಲಿಗೇ ಪಯಣ ಯಾವುದೋ ದಾರಿ
ಏಕಾಂಗಿ ಸಂಚಾರಿ ಏಕಾಂಗಿ ಸಂಚಾರಿ
ಮಡದಿ ಮಕ್ಕಳು ಸ್ನೇಹಿತರನ್ನು ಮಣ್ಣಿನ ವಶ ಮಾಡಿ
ನಡೆದಿಹೆ ಇಂದು ಅಂಧನ ರೀತಿ ಶೋಕದೇ
ಏನೋ ನಿನ್ನ ಗುರಿ ಎಲ್ಲಿಗೇ ಪಯಣ
ಸೋಲು ಗೆಲುವು ಸಾವು ನೋವು ಜೀವನದುಯ್ಯಾಲೆ
ಸಾಯುವ ಮುನ್ನ ಜನಿಸಿದ ಮಣ್ಣಾ ದರುಶನ ನೀ ಪಡೆದು
ತಾಯಿಯ ಮಡಿಲ ಧೂಳಲಿ ಬೆರೆತು ಶೂನ್ಯದೇ ಮುಗಿಸು ನಿನ್ನ ಕಥೆ
ಎಲ್ಲಿಗೇ ಪಯಣ ಯಾವುದೋ ದಾರಿ ಏಕಾಂಗಿ ಸಂಚಾರಿ
ಏಕಾಂಗಿ ಸಂಚಾರಿ ಏಕಾಂಗಿ ಸಂಚಾರಿ.
ರಚನೆ: ಆರ್.ಎನ್. ಜಯಗೋಪಾಲ್
ಸಂಗೀತ: ಉಪೇಂದ್ರ ಕುಮಾರ್
ಹಿನ್ನಲೆ ಗಾಯನ: ಪಿ.ಬಿ. ಶ್ರೀನಿವಾಸ್
ಕಥೆ ಮುಗಿಯಿತೇ ಆರಂಭದ ಮುನ್ನ
ಲತೆ ಬಾಡಿ ಹೋಯಿತೆ ಹೂವಾಗುವ ಮುನ್ನ
ಎಲ್ಲಿಗೇ ಪಯಣ ಯಾವುದೋ ದಾರಿ
ಏಕಾಂಗಿ ಸಂಚಾರಿ ಏಕಾಂಗಿ ಸಂಚಾರಿ
ಮಡದಿ ಮಕ್ಕಳು ಸ್ನೇಹಿತರನ್ನು ಮಣ್ಣಿನ ವಶ ಮಾಡಿ
ನಡೆದಿಹೆ ಇಂದು ಅಂಧನ ರೀತಿ ಶೋಕದೇ
ಏನೋ ನಿನ್ನ ಗುರಿ ಎಲ್ಲಿಗೇ ಪಯಣ
ಸೋಲು ಗೆಲುವು ಸಾವು ನೋವು ಜೀವನದುಯ್ಯಾಲೆ
ಸಾಯುವ ಮುನ್ನ ಜನಿಸಿದ ಮಣ್ಣಾ ದರುಶನ ನೀ ಪಡೆದು
ತಾಯಿಯ ಮಡಿಲ ಧೂಳಲಿ ಬೆರೆತು ಶೂನ್ಯದೇ ಮುಗಿಸು ನಿನ್ನ ಕಥೆ
ಎಲ್ಲಿಗೇ ಪಯಣ ಯಾವುದೋ ದಾರಿ ಏಕಾಂಗಿ ಸಂಚಾರಿ
ಏಕಾಂಗಿ ಸಂಚಾರಿ ಏಕಾಂಗಿ ಸಂಚಾರಿ.
ನಿನಗಾಗಿ ಓಡೋಡಿ ಬಂದೆ
ಚಿತ್ರ: ಸನಾದಿ ಅಪ್ಪಣ್ಣ
ರಚನೆ: ಚಿ.ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್
>
ನಿನಗಾಗಿ ಓಡೋಡಿ ಬಂದೆ ನಾನು
ಕಾಣದೆ ಹೀಗೇಕೆ ಮರೆಯಾಗಿ ಹೋದೆ
ಮರೆಯಾಗಿ ಹೋದೆ ನೀನು
ನಿನಗಾಗಿ ಓಡೋಡಿ ಬಂದೆ
ತಣ್ಣನೆ ಗಾಳಿ ಬೀಸಿದ ಹಾಗೆ
ಬಾಳಲಿ ಬಂದೆ ಸಂತಸ ತಂದೆ
ಕಣ್ಣಿಗೆ ಮಿಂಚು ಕಾಣುವ ಹಾಗೆ
ಬಾಳಿನ ಬಾನಲಿ ಬೆಳಕನು ತಂದೆ
ಸ್ನೇಹದಿ ಸೇರಿ ಮೋಹವ ತೋರಿ
ಸನಿಹಕೆ ಸಾರಿ ಮನವನು ಸೇರಿ
ಏಕೆ ನೀ ಮರೆಯಾದೆ
ನಿನಗಾಗಿ ಓಡೋಡಿ ಬಂದೆ...
ಬಿಸಿಲಿಗೆ ಹೂವು ಬಾಡುವ ಹಾಗೆ
ಕಾಣದಿ ನೊಂದೆ ವಿರಹದಿ ಬೆಂದೆ
ಮುಳ್ಳಿನ ಬಲೆಯ ಇಳಿಯಂತಾಗಿ
ಅಳುಕಿದೆ ಮನವು ನಡುಗಿದೆ ತನುವು
ತೀರದ ನೋವ ತಾಳದು ಜೀವ
ಕಾಣದೆ ನೀನು ಉಳಿಯನು ನಾನು
ಏಕೆ ನೀ ದೂರಾದೆ... ದೂರಾದೆ....
ನಿನಗಾಗಿ ಓಡೋಡಿ ಬಂದೆ...
ರಚನೆ: ಚಿ.ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್
>
ನಿನಗಾಗಿ ಓಡೋಡಿ ಬಂದೆ ನಾನು
ಕಾಣದೆ ಹೀಗೇಕೆ ಮರೆಯಾಗಿ ಹೋದೆ
ಮರೆಯಾಗಿ ಹೋದೆ ನೀನು
ನಿನಗಾಗಿ ಓಡೋಡಿ ಬಂದೆ
ತಣ್ಣನೆ ಗಾಳಿ ಬೀಸಿದ ಹಾಗೆ
ಬಾಳಲಿ ಬಂದೆ ಸಂತಸ ತಂದೆ
ಕಣ್ಣಿಗೆ ಮಿಂಚು ಕಾಣುವ ಹಾಗೆ
ಬಾಳಿನ ಬಾನಲಿ ಬೆಳಕನು ತಂದೆ
ಸ್ನೇಹದಿ ಸೇರಿ ಮೋಹವ ತೋರಿ
ಸನಿಹಕೆ ಸಾರಿ ಮನವನು ಸೇರಿ
ಏಕೆ ನೀ ಮರೆಯಾದೆ
ನಿನಗಾಗಿ ಓಡೋಡಿ ಬಂದೆ...
ಬಿಸಿಲಿಗೆ ಹೂವು ಬಾಡುವ ಹಾಗೆ
ಕಾಣದಿ ನೊಂದೆ ವಿರಹದಿ ಬೆಂದೆ
ಮುಳ್ಳಿನ ಬಲೆಯ ಇಳಿಯಂತಾಗಿ
ಅಳುಕಿದೆ ಮನವು ನಡುಗಿದೆ ತನುವು
ತೀರದ ನೋವ ತಾಳದು ಜೀವ
ಕಾಣದೆ ನೀನು ಉಳಿಯನು ನಾನು
ಏಕೆ ನೀ ದೂರಾದೆ... ದೂರಾದೆ....
ನಿನಗಾಗಿ ಓಡೋಡಿ ಬಂದೆ...
Wednesday, July 11, 2007
ಎದೆಯು ಮರಳಿ ತೊಳಲುತಿದೆ
ರಚನೆ: ಗೋಪಾಲಕೃಷ್ಣ ಅಡಿಗ
ಎದೆಯು ಮರಳಿ ತೊಳಲುತಿದೆ,
ದೊರೆಯುದದನೆ ಹುಡುಕುತಿದೆ;
ಅತ್ತ ಇತ್ತ ದಿಕ್ಕುಗೆಟ್ಟು
ಬಳ್ಳಿ ಬಾಳು ಚಾಚುತಿದೆ
ತನ್ನ ಕುಡಿಯನು.
ಸಿಗಲಾರದ ಆಸರಕೆ
ಕಾದ ಕಾವ ಬೇಸರಕೆ
ಮಿಡುಕಿ ದುಡುಕಲೆಳಸುತಿದೆ
ತನ್ನ ಗಡಿಯನು.
ಎದೆಯು ಮರಳಿ ತೊಳಲುತಿದೆ...
ಅದಕು ಇದಕು ಅಂಗಲಾಚಿ
ತನ್ನೊಲವಿಗೆ ತಾನೆ ನಾಚಿ
ದಡವ ಮುಟ್ಟಿ ಮುಟ್ಟದೊಲು
ಹಿಂದೆಗೆಯುವ ವೀಚಿ ವೀಚಿ
ಮುರುಟದಲಿದೆ ಮನದಲಿ !
ಎದೆಯು ಮರಳಿ ತೊಳಲುತಿದೆ...
ನೀರದಗಳ ದೂರತೀರ
ಕರೆಯುತಲಿದೆ ಎದೆಯ ನೀರ,
ಮೀರುತಲಿದೆ ಹೃದಯಭಾರ
ತಾಳಲೆಂತು ನಾ ?
ಎದೆಯು ಮರಳಿ ತೊಳಲುತಿದೆ...
ಯಾವ ಬಲವು ಯಾವ ಒಲವು
ಕಾಯಬೇಕೋ ಅದರ ಹೊಳವು
ಕಾಣದೆ ದಳ್ಳಿಸಲು ಮನವು
ಬಾಳಲೆಂತು ನಾ ?
ಎದೆಯು ಮರಳಿ ತೊಳಲುತಿದೆ...
ಎದೆಯು ಮರಳಿ ತೊಳಲುತಿದೆ,
ದೊರೆಯುದದನೆ ಹುಡುಕುತಿದೆ;
ಅತ್ತ ಇತ್ತ ದಿಕ್ಕುಗೆಟ್ಟು
ಬಳ್ಳಿ ಬಾಳು ಚಾಚುತಿದೆ
ತನ್ನ ಕುಡಿಯನು.
ಸಿಗಲಾರದ ಆಸರಕೆ
ಕಾದ ಕಾವ ಬೇಸರಕೆ
ಮಿಡುಕಿ ದುಡುಕಲೆಳಸುತಿದೆ
ತನ್ನ ಗಡಿಯನು.
ಎದೆಯು ಮರಳಿ ತೊಳಲುತಿದೆ...
ಅದಕು ಇದಕು ಅಂಗಲಾಚಿ
ತನ್ನೊಲವಿಗೆ ತಾನೆ ನಾಚಿ
ದಡವ ಮುಟ್ಟಿ ಮುಟ್ಟದೊಲು
ಹಿಂದೆಗೆಯುವ ವೀಚಿ ವೀಚಿ
ಮುರುಟದಲಿದೆ ಮನದಲಿ !
ಎದೆಯು ಮರಳಿ ತೊಳಲುತಿದೆ...
ನೀರದಗಳ ದೂರತೀರ
ಕರೆಯುತಲಿದೆ ಎದೆಯ ನೀರ,
ಮೀರುತಲಿದೆ ಹೃದಯಭಾರ
ತಾಳಲೆಂತು ನಾ ?
ಎದೆಯು ಮರಳಿ ತೊಳಲುತಿದೆ...
ಯಾವ ಬಲವು ಯಾವ ಒಲವು
ಕಾಯಬೇಕೋ ಅದರ ಹೊಳವು
ಕಾಣದೆ ದಳ್ಳಿಸಲು ಮನವು
ಬಾಳಲೆಂತು ನಾ ?
ಎದೆಯು ಮರಳಿ ತೊಳಲುತಿದೆ...
Subscribe to:
Posts (Atom)