Tuesday, April 22, 2014

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ

ಸಾಹಿತ್ಯ: ಚನ್ನವೀರ ಕಣವಿ
ಸಂಗೀತ: ಸಿ. ಅಶ್ವಥ್
ಗಾಯಕರು: ಬಿ.ಆರ್.ಛಾಯ



ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ
ಸೋ! ಎಂದು ಶೃತಿ ಹಿಡಿದು ಸುರಿಯುತಿತ್ತು
ಅದಕೇ ಹಿಮ್ಮೇಳವನೆ ಸೂಸಿಪಹ ಸುಳಿಗಾಳಿ
ತೆಂಗು ಗರಿಗಳ ನಡುವೆ ನುಸುಳುತಿತ್ತು

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ...

ಇಳೆವೆಣ್ಣು ಮೈದೊಳೆದು ಮಕರಂದದರಿಶಣದಿ
ಹೂ ಮುಡಿದು ಮದುಮಗಳ ಹೋಲುತಿತ್ತು
ಮೂಡಣದಿ ನೇಸರನ ನಗೆ ಮೊಗದಾ ಶ್ರೀಕಾಂತಿ
ಬಿಳಿಯಾ ಮೋಡದ ಹಿಂದೆ ಹೊಳೆಯುತಿತ್ತು

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ...

ಹುಲ್ಲೆಸಳು ಹೂಪಕಳೆ ಮುತ್ತು ಹನಿಗಳ ಮಿಂಚು
ಸೊಡರಿನಲಿ ಆರತಿಯ ಬೆಳಗುತಿತ್ತು
ಕೊರಲುಕ್ಕಿ ಹಾಡುತಿಹ ಚಿಕ್ಕಪಕ್ಕಿಯ ಬಳಗ
ಶುಭಮಸ್ತು ಶುಭಮಸ್ತು ಎನ್ನುತಿತ್ತು

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ...

ತಳಿರ ತೋರಣದಲ್ಲಿ ಬಳ್ಳಿ ಮಾಡಗಳಲ್ಲಿ
ದುಂಬಿಗಳ ಓಂಕಾರ ಹೊಮ್ಮುತಿತ್ತು
ಹಚ್ಚ ಹಸುರಿನ ಪಚ್ಚೆ ನೆಲಗಟ್ಟಿನಂಗಳದಿ
ಚಿಟ್ಟೆ ರಿಂಗಣ ಗುಣಿತ ಹಾಕುತಿತ್ತು

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ...

ಉಷೆಯ ನುಙ್ಗದಪಿನಲಿ ಹರ್ಷಬಾಷ್ಪಗಳಂತೆ
ಮರದ ಹನಿ ತಟಪಟನೆ ಉದುರುತಿತ್ತು
ಸೃಷ್ಠಿಲೀಲೆಯೊಳಿಂತು ತಲ್ಲೀನವಾದ ಮನ
ಮುಂಬಾಳ ಸವಿಗನಸ ನೆನೆಯುತಿತ್ತು

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ...

Tuesday, May 21, 2013

ಮನಸೇ ನನ್ನ ಮನಸೇ ಏನಾಗಿದೆ ನಿನಗೆ

ರಚನೆಬಿ. ಆರ್. ಲಕ್ಷ್ಮಣರಾವ್ 
ಸಂಗೀತ ಮತ್ತು ಹಿನ್ನಲೆ ಗಾಯನ: ಸಿ ಅಶ್ವಥ್




ಮನಸೇ ನನ್ನ ಮನಸೇ
ಏನಾಗಿದೆ ನಿನಗೆ
ಏಕೆ ಅವಳ ಕಹಿ ನೆನಪೇ
ಜೇನಾಗಿದೆ ನಿನಗೆ

ಬೇಡವೆಂದರೂ ಏಕೆ ತರುವೆ
ಕಣ್ಮುಂದೆ ಅವಳ ಚಿತ್ರ
ಬೂಟಾಟಿಕೆ ಆ ನಾಟಕ
ಅವಳ ವಿವಿಧ ಪಾತ್ರ

ಮನಸೇ ನನ್ನ ಮನಸೇ ಏನಾಗಿದೆ ನಿನಗೆ...

ಪದೇ ಪದೇ ಮತ್ತದೇ ಜಾಗಕ್ಕೆ
ನನ್ನ ಸೆಳೆವೆಯೇಕೆ
ಕಂಡು ಮರುಗಲು ಕುಸಿದ ಅರಮನೆ
ಉರುಳಿದ ಪ್ರೇಮ ಪತಾಕೆ

ಮನಸೇ ನನ್ನ ಮನಸೇ ಏನಾಗಿದೆ ನಿನಗೆ...

ಮಣ್ಣಾಗಿದೆ ನನ್ನ ಪ್ರೀತಿ
ಹೃದಯದ ಗೋರಿಯಲ್ಲಿ
ಗೋರಿಯನ್ನೇಕೆ ಬಗೆಯುವೆ
ಮೋಹದ ಹಾರೆಯಲ್ಲಿ

ಮನಸೇ ನನ್ನ ಮನಸೇ ಏನಾಗಿದೆ ನಿನಗೆ...

Thursday, May 2, 2013

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು

ಸಾಹಿತ್ಯ : ಆರ್.ಎನ್. ಜಯಗೋಪಾಲ್
ಸಂಗೀತ : ವಿಜಯಭಾಸ್ಕರ್
ಗಾಯನ : ಬಿ.ಕೆ. ಸುಮಿತ್ರ



ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು
ಚಿಕ್ಕವ್ವ....ಚಿಕ್ಕವ್ವ.....ಎನ್ನುತ ತನ್ನಾ ಗೆಳೆಯರ ಕರೆದಿತ್ತು
ಅದ ಕೇಳಿ ನಾ ಮೈ ಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ದೂರದ ಗುಡಿಯಲಿ ಪೂಜೆಯ ವೇಳೆಗೆ
ಘಂಟೆಯು ಮೊಳಗಿತ್ತು
ಟಣ್ ಡಣ್ ಟಣ್ ಡಣ್
ಎನ್ನುತ ಸೇವೆಗೆ ಎಲ್ಲರ ಕರೆದಿತ್ತು
ಅದಕೇಳಿ ನಾ ಮೈಮರೆತೆ
ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು...

ಹರಿಯುವ ನದಿಯಾ ನೋಡುತ ನಿಂತೆ
ಅಲೆಗಳು ಕುಣಿದಿತ್ತು
ಕಲ ಕಲ ಕಲ ಕಲ......
ಮಂಜುಳ ನಾದವು ಕಿವಿಗಳ ತುಂಬಿತ್ತು
ಅದಕೇಳಿ ನಾ ಮೈ ಮರೆತೆ
ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು...

Sunday, October 3, 2010

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ

ಚಿತ್ರ: ಅನುಭವ
ಸಾಹಿತ್ಯ: ವಿ.ಮನೋಹರ್
ಸಂಗೀತ: ಎಲ್. ವೈದ್ಯನಾಥನ್
ಗಾಯನ: ವಾಣಿ ಜಯರಾಮ್




ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ
ನೀ ಅರಿಯದೆ ಹೋದೆ ಪ್ರೇಮದ ನಾ ಸಂದೇಶವ ತಂದಾಗ
ನೀ ಶೃತಿಯ ಮಿಡಿದಾಗ ಹಾಡಿದೆ ನಾ ಹುಸಿ ರಾಗ
ತೋರಿದೆ ನೀ ಅನುರಾಗ ಗಮನಿಸದೆ ತೆರಳಿದೆ ನಾ

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ...

ನಲ್ಲ ಬಳಿಸಾರಿ ಮೆಲ್ಲ ಬಿಗಿದಾಗ ತಳ್ಳಿ ದೂರಾದೆ ಅರಿಯದೆ ನಾ
ಮದನ ನೀನಾಗಿ ಮುದದಿ ತೆರೆದಾಗ ರತಿಯ ಸವಿಲೀಲೆ ಮರೆತೆನು ನಾ
ಹೂವಿನ ಹಾಸಿಗೆ ನೀ ಹಾಸಿ ಮೋಗದಿ ನನ್ನನು ಕರೆದಾಗ
ಮಾಡಿದೆ ನಾನು ಪರಿಹಾಸ ನೀಡದೆ ನಿನಗೆ ಉಲ್ಲಾಸ
ಸವಿ ಇರುಳ ಹೊಂಗನಸ ಮುರಿದೆನು ನಾ

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ...

ಮೇಘ್ಹ ಸರಿದಾಗ ತಾರೆ ಹೊಳೆದಾಗ ಚಂದ್ರ ಮರೆಯಾದ ನನ್ನ ತೊರೆದ
ಯಾರ ಬಳಿನಾನು ನೋವ ನುಡಿದೇನು ಇನಿಯ ಮರೆತಾಗ ಸಹಿಸೆನು ನಾ
ಬಾಳೆನು ಚಿಂತೆಯ ಪಾಲಾಇ ದುಂಬಿಯ ಕಾಣದ ಹೂವಾಗಿ
ತಾಳೆನು ನಾನು ಏಕಾಂತ ಬರುವೆನೆಇನ್ನ ಓ ಕಾಂತ
ಕೊರಗುತಿಹೆ ಮರುಗುತಿಗೆ ವಿರಹದಿ ನಾ

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ...

Sunday, September 26, 2010

ಬಾನಲ್ಲಿ ನಿನ್ನಿಂದ ಸೂರ್ಯೋದಯ

ಚಿತ್ರ: ನೀನು ನಕ್ಕರೆ ಹಾಲು ಸಕ್ಕರೆ
ಸಾಹಿತ್ಯ: ಹಂಸಲೇಖ
ಸಂಗೀತ: ಹಂಸಲೇಖ



ಶರಣೂ... ಶರಣೆನುವೆ...ಶರಣೆನುವೆ...
ಓ... ಪ್ರಭುವೇ... ಶರಣೆನುವೆ...

ಬಾನಲ್ಲಿ ನಿನ್ನಿಂದ ಸೂರ್ಯೋದಯ
ಬಾಳಲ್ಲಿ ನಿನ್ನಿಂದ ಅರುಣೋದಯ
ಬಾನಲ್ಲಿ ನಿನ್ನಿಂದ ಚಂದ್ರೋದಯ
ಆನಂದ ನಿನ್ನಿಂದ ಕರುಣಾಮಯ
ಮೋಡ ಮಳೆಯಾಗಲು ನೀರು ಭುವಿ ಸೇರಲು
ಭೂಮಿ ಹಸಿರಾಗಲು ಲೋಕ ಗೆಲುವಾಗಲು
ಓಂ ಓಂ ಓಂ ಓಂ ಓಂ ಓಂ ಓಂ
ನೀ ಕಾರಣನು ದೇವ

ಬಾನಲ್ಲಿ ನಿನ್ನಿಂದ ಸೂರ್ಯೋದಯ...

ಈ ಲತೆ ನೀನೆ... ಆssss
ಈ ಲತೆ ನೀನೆ ಈ ಸುಮ ನೀನೆ
ಈ ಸುಮತಂದ ಗಂಧವೂ ನೀನೆ
ಕಲ್ಲಲ್ಲಿ ಮುಳ್ಳಲ್ಲಿ ಮಣ್ಣಲ್ಲಿಯೂ
ಗಿರಿಯಲ್ಲಿ ಗುಹೆಯಲ್ಲಿ ವನದಲ್ಲಿಯೂ
ಬಾನಾಡಿ ಕೊರಳಲ್ಲಿ ಇಂಪಾಗಿಯೂ
ತಂಗಾಳಿ ಸುಳಿಯಲ್ಲಿ ತಂಪಾಗಿಯೂ
ತಂಗಾಳಿ ಸುಳಿಯಲ್ಲಿ ತಂಪಾಗಿಯೂ
ಹಣ್ಣ ರುಚಿಯಲ್ಲಿಯೂ, ಜೇನ ಸಿಹಿಯಲ್ಲಿಯೂ, ಹಾಲ ಬೆಳಕಲ್ಲಿಯೂ, ರಾತ್ರಿ ಇರುಳಲ್ಲಿಯೂ
ಓಂ ಓಂ ಓಂ ಓಂ ಓಂ ಓಂ
ನೀನೇ ಇರುವೆ ದೇವ ಆಸ್ಸ್ಸ್

ಬಾನಲ್ಲಿ ನಿನ್ನಿಂದ ಸೂರ್ಯೋದಯ...

ಈಶ್ವರ ನೀನೇ...ಆsss
ಈಶ್ವರ ನೀನೇ ಶಾಶ್ವತ ನೀನೇ
ಎಲ್ಲವೂ ನೀನೇ ಎಲ್ಲೆಡೆ ನೀನೇ
ಸಂತೋಷ ಕೊಡುವಂತ ನಗೆಯಲ್ಲಿಯೂ
ಕಂದಂಗೆ ತಾಯ್ಕೊಡುವ ಮುತ್ತಲ್ಲಿಯೂ
ಹಿತವಾದ ಸಂಗೀತ ಸ್ವರದಲ್ಲಯೂ
ಕವಿಯಾಡೊ ಸವಿಯಾದ ಮಾತಲ್ಲಿಯೂ
ಕವಿಯಾಡೊ ಸವಿಯಾದ ಮಾತಲ್ಲಿಯೂ
ಬೆಂಕಿ ಕಿಡಿಯಲ್ಲಿಯೂ, ನೀರ ಹನಿಯಲ್ಲಿಯೂ, ಕಡಲ , ಸಿಡಿವ ಸಿಡಿಲಲ್ಲಿಯೂ
ಓಂ ಓಂ ಓಂ ಓಂ ಓಂ ಓಂ
ನೀನೇ ಇರುವೆ ದೇವ ಆsss

ಬಾನಲ್ಲಿ ನಿನ್ನಿಂದ ಸೂರ್ಯೋದಯ...

Saturday, September 18, 2010

ಅಳಬೇಡ ತಂಗಿ ಅಳಬೇಡ

ಚಿತ್ರ: ಸಂತ ಶಿಶುನಾಳ ಶರೀಫ
ಸಾಹಿತ್ಯ: ಶಿಶುನಾಳ ಷರೀಫ್
ಸಂಗೀತ: ಸಿ.ಅಶ್ವಥ್
ಹಿನ್ನಲೆ ಗಾಯನ:
ಶಿವಮೊಗ್ಗ ಸುಬ್ಬಣ್ಣ



ಅಳಬೇಡ ತಂಗಿ ಅಳಬೇಡ
ನಿನ್ನ ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ

ದಡಿಕೀಲೆ ಉಡಿಯಕ್ಕಿ ಹಾಕಿದರವ್ವ
ಒಳ್ಳೆ ದುಡುಕೀಲೇ ಮುಂದಕ್ಕೆ ನೂಕಿದರವ್ವ
ಮಿಡಿಕ್ಯಾಡಿ ಮದಿವ್ಯಾದೆ ಮೋಜು ಕಾಣವ್ವ
ನೀ ಹುಡುಕ್ಯಾಡಿ ಮಾಯದ ಮರವೇರಿದ್ಯವ್ವ

ಅಳಬೇಡ ತಂಗಿ ಅಳಬೇಡ...

ರಂಗೀಲೀ ಉಟ್ಟೀದಿ ರೇಶ್ಮೀ ದಡಿ ಸೀರಿ
ಮತ್ತ ಹಂಗ ನೂಲಿನ ಪರಿವಿ ಮರಿತ್ಯವ್ವ ನಾರಿ
ಮಂಗಳ ಮೂರುತಿ ಶಿಶುನಾಳಧೀಶನ
ಅಂಗಳಕ ನೀ ಹೊರತು ಆದ್ಯವ್ವ ಗೌರಿ

ಅಳಬೇಡ ತಂಗಿ ಅಳಬೇಡ...

Saturday, September 11, 2010

ಗುಡಿಯ ನೋಡಿರಣ್ಣಾ

ಚಿತ್ರ: ಸಂತ ಶಿಶುನಾಳ ಶರೀಫ
ಸಾಹಿತ್ಯ: ಶಿಶುನಾಳ ಷರೀಫ್
ಸಂಗೀತ: ಸಿ.ಅಶ್ವಥ್
ಹಿನ್ನಲೆ ಗಾಯನ: ಸಿ.ಅಶ್ವಥ್



ಗುಡಿಯ ನೋಡಿರಣ್ಣಾ
ದೇಹದ ಗುಡಿಯ ನೋಡಿರಣ್ಣಾ

ಗುಡಿಯ ನೋಡಿರಿದು
ಪೊಡವಿಗೆ ಒಡೆಯನು
ಆಡಗಿಕೊಂಡು ಕಡುಬೆಡಗಿನೊಳಿರುತಿಹ
ಗುಡಿಯ ನೋಡಿರಣ್ಣಾ

ಮೂರು ಮೂಲೆಯ ಕಲ್ಲು ಅದರೊಳು
ಜಾರುತಿರುವ ಕಲ್ಲು
ಧೀರ ನಿರ್ಗುಣನು ಸಾರ ಸಗುಣದಲಿ
ತೋರಿ ಅಡಗಿ ತಾ ಬ್ಯಾರ್ಯಾಗಿರುತಿಹ
ಗುಡಿಯ ನೋಡಿರಣ್ಣಾ ದೇಹದ ಗುಡಿಯ ನೋಡಿರಣ್ಣಾ...

ಆರು ಮೂರು ಕಟ್ಟಿ ಮೇಲಕೆ
ಏರಿದನು ಘಟ್ಟಿ
ಭೇರಿ ಕಾಳಿ ಶಂಖ
ಭಾರಿ ಸುನಾದದಿ
ಮೀರಿದಾನಂದ ತೋರಿ ಹೊಳೆಯುತಿಹ
ಗುಡಿಯ ನೋಡಿರಣ್ಣಾ ದೇಹದ ಗುಡಿಯ ನೋಡಿರಣ್ಣಾ...

ಸಾಗುತಿಹವು ದಿವಸ ಬಹುದಿನ
ಹೋಗಿ ಮಾಡಿ ಪಾಯ್ಸ
ಯೋಗಿ ರಾಜ ಶಿಶುನಾಳಧೀಶ ತಾ—
ನಾಗಿ ಪರಾತ್ಪರ ಬ್ರಹ್ಮರೂಪನಿಹ
ಗುಡಿಯ ನೋಡಿರಣ್ಣಾ ದೇಹದ ಗುಡಿಯ ನೋಡಿರಣ್ಣಾ...

Sunday, September 5, 2010

ಮೋಹದ ಹೆಂಡತಿ ತೀರಿದ ಬಳಿಕ

ಚಿತ್ರ: ಸಂತ ಶಿಶುನಾಳ ಶರೀಫ
ಸಾಹಿತ್ಯ: ಶಿಶುನಾಳ ಷರೀಫ್
ಸಂಗೀತ: ಸಿ.ಅಶ್ವಥ್
ಹಿನ್ನಲೆ ಗಾಯನ: ಸಿ.ಅಶ್ವಥ್



ಮೋಹದ ಹೆಂಡತಿ ತೀರಿದ ಬಳಿಕ
ಮಾವನ ಮನೆಯ ಹಂಗಿನ್ಯಾಕೋ
ಸಾವು ನೋವಿಗೆ ಸಾರದ ಬೀಗನ
ಮಾತಿನ ಹಂಗೊಂದೆನಗ್ಯಾಕೋ?

ಖಂಡವನದಿ ಸೋಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವುದು ಭಯವ್ಯಾಕೋ?
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾಡುವುದ್ಯಾಕೋ?

ಮೋಹದ ಹೆಂಡತಿ ತೀರಿದ ಬಳಿಕ...

ತಂದೆ ಗೋವಿಂದ ಗುರುವಿನ ಸೇವಕ
ಕುಂದಗೋಳಕೆ ಬಂದು ನಿಂತನ್ಯಾಕೋ ?
ಬಂಧುರ ಶಿಶುನಾಳಾಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನವು ಸಾಕೋ.

ಮೋಹದ ಹೆಂಡತಿ ತೀರಿದ ಬಳಿಕ...

Sunday, August 29, 2010

ಸೋರುತಿಹುದು ಮನೆಯ ಮಾಳಿಗಿ

ಚಿತ್ರ: ಸಂತ ಶಿಶುನಾಳ ಶರೀಫ
ಸಾಹಿತ್ಯ: ಶಿಶುನಾಳ ಷರೀಫ್
ಸಂಗೀತ: ಸಿ.ಅಶ್ವಥ್
ಹಿನ್ನಲೆ ಗಾಯನ: ಸಿ.ಅಶ್ವಥ್

ಸೋರುತಿಹುದು ಮನೆಯ ಮಾಳಿಗಿ
ಅಜ್ಞಾನದಿಂದಾ
ಸೋರುತಿಹುದು ಮನೆಯ ಮಾಳಿಗಿ

ಸೋರುತಿಹುದು ಮನೆಯ ಮಾಳಿಗಿ
ದಾರು ಗಟ್ಟಿ ಮಾಳ್ಪರಿಲ್ಲ
ಕಾಳ ಕತ್ತಲೆಯೊಳಗೆ ನಾನು
ಮೇಲಕೇರಿ ಹೋಗಲಾರೆ

ಸೋರುತಿಹುದು ಮನೆಯ ಮಾಳಿಗಿ...

ಮುರುಕು ತೊಲೆಯು ಹುಳುಕು ಜಂತಿ
ಕೊರೆದು ಸರಿದು ಕೀಲ ಸಡಲಿ
ಹರುಕು ಚಪ್ಪರ ಜೇರುಗಿಂಡಿ
ಮೇಲಕೇರಿ ಹೋಗಲಾರೆ

ಸೋರುತಿಹುದು ಮನೆಯ ಮಾಳಿಗಿ...

ಕರಕಿ ಹುಲ್ಲು ಕಸವು ಹತ್ತಿ
ಹರಿದು ಸಾಲು ಇರಬಿ ಮುತ್ತಿ
ಜಲದ ಭರದಿ ಸರಿಯೆ ಮಣ್ಣು
ಒಳಗೆ ಹೊರಗೆ ಏಕವಾಗಿ

ಸೋರುತಿಹುದು ಮನೆಯ ಮಾಳಿಗಿ...

ಕಾಂತೆ ಕೇಳೆ ಕರುಣದಿಂದ
ಬಂತು ಕಾಣೆ ಹುಬ್ಬು ಮಳೆಯು
ಎಂತೊ ಶಿಶುನಾಳಧೀಶನ ತಾನು
ನಿಂತು ಪೊರೆವನು ಎಂದು ನಂಬಿದೆ

ಸೋರುತಿಹುದು ಮನೆಯ ಮಾಳಿಗಿ...

Saturday, August 21, 2010

ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ

ಚಿತ್ರ:ಸಂತ ಶಿಶುನಾಳ ಶರೀಫ
ಸಾಹಿತ್ಯ: ಶಿಶುನಾಳ ಷರೀಫ್
ಸಂಗೀತ: ಸಿ.ಅಶ್ವಥ್
ಹಿನ್ನಲೆ ಗಾಯನ: ಸಿ.ಅಶ್ವಥ್



ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ
ಆಡು ಆನೆಯ ನುಂಗಿ
ಗೋಡೆ ಸುಣ್ಣಾವ ನುಂಗಿ
ಆಡಲು ಬಂದ ಪಾತರದವಳ
ಮದ್ದಳೆ ನುಂಗಿತ್ತಾ ತಂಗಿ
ಕೋಡಗನ ಕೋಳಿ ನುಂಗಿತ್ತಾ

ಒಳ್ಳು ಒನಕೆಯ ನುಂಗಿ
ಕಲ್ಲು ಗೂಟಾವ
ಮೆಲ್ಲಲು ಬಂದ ಮುದುಕಿಯನ್ನೆ
ನೆಲ್ಲು ನುಂಗಿತ್ತಾ ತಂಗಿ
ಕೋಡಗನ ಕೋಳಿ ನುಂಗಿತ್ತಾ

ಕೋಡಗನ ಕೋಳಿನುಂಗಿತ್ತಾ ನೋಡವ್ವ ತಂಗಿ...

ಹಗ್ಗ ಮಗ್ಗಾವ ನುಂಗಿ
ಮಗ್ಗಾವ ಲಾಳಿ ನುಂಗಿ
ಮಗ್ಗದಲಿರುವ ಅಣ್ಣನನ್ನೆ
ಮಣಿಯು ನುಂಗಿತ್ತಾ ತಂಗಿ
ಕೋಡಗನ ಕೋಳಿ ನುಂಗಿತ್ತಾ

ಕೋಡಗನ ಕೋಳಿನುಂಗಿತ್ತಾ ನೋಡವ್ವ ತಂಗಿ...

ಗುಡ್ಡ ಗವಿಯನ್ನು ನುಂಗಿ
ಗವಿಯು ಇರುವೆಯಾ ನುಂಗಿ
ಗೋವಿಂದಾ ಗುರುವಿನ ಪಾದ
ನನ್ನನೆ ನುಂಗಿತ್ತಾ ತಂಗಿ
ಕೋಡಗನ ಕೋಳಿ ನುಂಗಿತ್ತಾ


ಕೋಡಗನ ಕೋಳಿನುಂಗಿತ್ತಾ ನೋಡವ್ವ ತಂಗಿ...

Thursday, August 12, 2010

ಜೀವ ಹೂವಾಗಿದೆ ಭಾವ ಜೇನಾಗಿದೆ

ಚಿತ್ರ: ನೀ ನನ್ನ ಗೆಲ್ಲಲಾರೆ
ಸಾಹಿತ್ಯ: ಚಿ.ಉದಯಶಂಕರ್
ಸಂಗೀತ: ಇಳಯ ರಾಜ
ಹಿನ್ನಲೆ ಗಾಯನ: ಡಾ.ರಾಜಕುಮಾರ್ ಮತ್ತು ಎಸ್.ಜಾನಕಿ




ಐ ಲವ್ ಯೂ, ಐ ಲವ್ ಯೂ
ಐ ಲವ್ ಯೂ, ಐ ಲವ್ ಯೂ
ಜೀವ ಹೂವಾಗಿದೆ ಭಾವ ಜೇನಾಗಿದೆ
ಬಾಳು ಹಾಡಾಗಿದೆ ನಿನ್ನ ಸೇರಿ ನಾನು
ಸಂಜೆ ತಂಗಾಳಿ ತಂಪಾಗಿ ಬೀಸಿ
ಹೂವ ಕಂಪನ್ನು ಹಾದಿಗೇ ಹಾಸಿ
ತಂದಿದೆ ಹಿತವ ನಮಗಾಗಿ
ತಂದಿದೆ ಹಿತವ ನಮಗಾಗಿ
ಜೋಡಿ ಬಾನಾಡಿ, ಮೇಲೆ ಹಾರಾಡಿ
ತೇಲಾಡಿ ಓಲಾಡಿ ನಲಿವಂತೆ,
ನಾವು ಆಡೋಣ ಇನ್ನೇಕೆ ಬಾ ಚಿಂತೆ
ಜೀವ ಹೂವಾಗಿದೆ ಭಾವ ಜೇನಾಗಿದೆ...
ಇನ್ನು ನಿನ್ನಾಸೆ ನನ್ನಾಸೆ ಒಂದೇ
ಎಂದು ನಾವಾಡೋ ಮಾತೆಲ್ಲ ಒಂದೇ
ಬಯಕೆಯು ಒಂದೇ ಗುರಿಯೊಂದೆ
ಬಯಕೆಯು ಒಂದೇ ಗುರಿಯೊಂದೆ
ನಿನ್ನ ಚೆಲುವಿಂದ ನಿನ್ನ ಒಲವಿಂದೆ
ನನ್ನಲ್ಲಿ ನೀ ತಂದೆ ಆನಂದ
ಈ ಸಂತೋಷ ಸೌಭಾಗ್ಯ ನಿನ್ನಿಂದ
ಜೀವ ಹೂವಾಗಿದೆ ಭಾವ ಜೇನಾಗಿದೆ...

Thursday, July 15, 2010

ಒಲಿದ ಜೀವ ಜೊತೆಯಲಿರಲು ಬಾಳು ಸುಂದರ

ಚಿತ್ರ:ಬೆಂಕಿಯ ಬಲೆ
ಸಾಹಿತ್ಯ : ಚಿ.ಉದಯಶಂಕರ್
ಸಂಗೀತ : ರಾಜನ್-ನಾಗೇಂದ್ರ
ಗಾಯನ : ಎಸ್.ಪಿ.ಬಾಲಸುಬ್ರಮಣ್ಯಂ ಮತ್ತು ಎಸ್.ಜಾನಕಿ






ಒಲಿದ ಜೀವ ಜೊತೆಯಲಿರಲು ಬಾಳು ಸುಂದರ
ಭವ್ಯವಾದ ಪ್ರೇಮ ಮಂದಿರ

ನಯನ ನಯನ ಬೆರೆತ ಸಮಯ ಬಾನಲ್ಲಿ ತೇಲಾಡಿದಂತೆ
ನಯನ ನಯನ ಬೆರೆತ ಸಮಯ ಬಾನಲ್ಲಿ ತೇಲಾಡಿದಂತೆ
ಕರವ ಹಿಡಿದಾಗ ನಗುತ ನಡೆವಾಗ ಭುವಿಯೇ ಸ್ವರ್ಗದಂತೆ

ಸನಿಹ ಕುಳಿತು ನುಡಿವ ನುಡಿಯು ಇಂಪಾದ ಹಾಡಿನಂತೆ
ಸನಿಹ ಕುಳಿತು ನುಡಿವ ನುಡಿಯು ಇಂಪಾದ ಹಾಡಿನಂತೆ
ಕನಸು ಕಣ್ಣಲ್ಲಿ ಸೊಗಸು ಎದುರಲ್ಲಿ ಬದುಕು ಕವಿತೆಯಂತೆ
ಕಣ್ಣೀರು ಪನ್ನೀರ ಹನಿಯಂತೆ

ಒಲಿದ ಜೀವ ಜೊತೆಯಲಿರಲು ಬಾಳು ಸುಂದರ...

ಉರಿವ ಬಿಸಿಲ ಸುರಿವ ರವಿಯೇ ತಂಪಾದ ಚಂದ್ರನಂತೆ
ಉರಿವ ಬಿಸಿಲ ಸುರಿವ ರವಿಯೇ ತಂಪಾದ ಚಂದ್ರನಂತೆ
ತುಳಿದ ಮುಳ್ಳೆಲ್ಲ ಅರಳಿ ಹೂವಂತೆ ಹಾದಿ ಮಿಟ್ಟಿಯಂತೆ

ಮೊಗದಿ ಹರಿವ ಬೆವರ ಹನಿಯು ಓಂದೊಂದು ಮುತ್ತಿನಂತೆ
ಮೊಗದಿ ಹರಿವ ಬೆವರ ಹನಿಯು ಓಂದೊಂದು ಮುತ್ತಿನಂತೆ
ಏನೊ ಉಲ್ಲಾಸ ಏನೊ ಸಂತೋಷ ಮರೆತು ಎಲ್ಲ ಚಿಂತೆ
ಒಲವಿಂದ ದಿನವೊಂದು ಕ್ಷಣವಂತೆ

ಒಲಿದ ಜೀವ ಜೊತೆಯಲಿರಲು ಬಾಳು ಸುಂದರ...

Tuesday, May 18, 2010

ಮುಂಜಾನೆ ಮೂಡಿದ ಹಾಗೆ

ಚಿತ್ರ: ಮುದುಡಿದ ತಾವರೆ ಅರಳಿತು
ಸಾಹಿತ್ಯ: ದೊಡ್ಡರಂಗೇಗೌಡ
ಸಂಗೀತ: ಎಂ. ರಂಗರಾವ್
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಹ್ಮಣ್ಯಂ


ಮುಂಜಾನೆ ಮೂಡಿದ ಹಾಗೆ
ತಂಗಾಳಿ ತೀಡಿದ ಹಾಗೆ
ಹೊಂಬಾಳೆ ತೂಗಿದ ಹಾಗೆ
ಕೆಂದಾವರೆ ನೀನು ನನಗೆ

ಹಸಿರಾದ ಪ್ರೀತಿಯ ಕಂಡು
ಉಸಿರಾಗ ಬಂದೆನು ನಾನು
ಸವಿಯಾದ ಸ್ನೇಹ ಮೋಹ ಬಲು
ಬೆಳೆದು ನಿಂತಿರಲು ಓಡಿ ಬಂದೆ ಬಳಿಗೆ

ಮುಂಜಾನೆ ಮೂಡಿದ ಹಾಗೆ...

ಹೊಸದಾದ ಆಸೆಯ ತೋರಿ
ಶಶಿಯಂತೆ ಬೆಳಗುವೆ ನೀನು
ಚೆಲುವಾದ ಬಾಳ ಕಡಲಿನಲಿ
ಒಲುಮೆ ದೋಣಿಯಲಿ ತೇಲು ನನ್ನ ಜೊತೆಗೆ

ಮುಂಜಾನೆ ಮೂಡಿದ ಹಾಗೆ...

Monday, May 17, 2010

ಒಲುಮೇ ಪೂಜೆಗೆಂದೆ ಕರೆಯಾ ಕೇಳಿ ಬಂದೆ

ಚಿತ್ರ: ಅನುಪಮ
ಸಾಹಿತ್ಯ: ದೊಡ್ಡರಂಗೇಗೌಡ
ಸಂಗೀತ: ಅಶ್ವಥ್ ಮತ್ತು ವೈದಿ
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಎಸ್.ಜಾನಕಿ



ಒಲುಮೇ ಪೂಜೆಗೆಂದೆ ಕರೆಯಾ ಕೇಳಿ ಬಂದೆ
ರಾಗ ತಾನ ಪ್ರೇಮಗಾನ ಸಂಜೀವನ

ಮಮತೆ ಮೀಟಿ ಮಿಲನ ಕಂಡೇ
ನಿನ್ನ ಸ್ನೇಹ ಸೌಭಾಗ್ಯ ಮಿಂದೇ
ಹರೆಯಾ ತೂಗಿ ಸನಿಹಾ ಬಂದೇ
ಎಲ್ಲ ಪ್ರೀತಿ ಸನ್ಮೋಹ ತಂದೇ
ಹರುಷಾ ತಂದಾ ಹಾದಿಯೆ ಚಂದಾ
ಒಲವಿನಾಸರೆ ರೋಮಾಂಚಬಂಧಾ

ಒಲುಮೇ ಪೂಜೆಗೆಂದೆ ಕರೆಯಾ ಕೇಳಿ ಬಂದೆ...

ಜೊತೆಯಾ ಸೇರೀ ಬರುವೆ ನಾನೂ
ನನ್ನ ಬಾಳ ಬಂಗಾರ ನೀನು
ಬೆಳಕು ನೀನೂ ಕಿರಣಾ ನಾನೂ
ನಿನ್ನ ಕೂಡಿ ಹೊಂಬಿಸಿಲ ಬಾನು
ನಿನಗೇ ನಾನು ನನಗೆ ನೀನು
ನಿನಗೇ ನಾನು ನನಗೆ ನೀನು
ಪ್ರೇಮ ಜೀವನ ಎಂದೆಂದು ಜೇನು

ಒಲುಮೇ ಪೂಜೆಗೆಂದೆ ಕರೆಯಾ ಕೇಳಿ ಬಂದೆ...

Saturday, May 15, 2010

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ

ಚಿತ್ರ : ಪರಸಂಗದ ಗೆಂಡೆತಿಮ್ಮ
ಸಾಹಿತ್ಯ: ದೊಡ್ಡರಂಗೇಗೌಡ
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಜಾನಕಿ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನಾ ನೋಟ ಕೂಡಿದಾಗ ಕಂಡೆ ಅನುರಾಗ

ಮನಸಿನ ಚಿಲುಮೆಯಾಗೆ ಮುಗಿಯದಾಸೆ ಚಿಮ್ಮೈತೆ
ಹೃದಯದ ಕುಲುಮೆಯಾಗೆ ನೂರು ಬಯಕೆ ಸಿಡಿದೈತೆ
ನಿನ್ನ ಕಾಣುವ ಬಾವ ಬೆಳೆದು ನನ್ನ ಕನಸು ಕಡೆದೈತೆ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ...

ತೆರೆಯದ ಬಯಕೆ ಬಾನು ದೂರ ದೂರ ಸರಿದೈತೆ
ಹರೆಯದ ಹಂಬಲ ಗಂಗೆ ಬಾಗಿ ಬಳುಕಿ ಹರಿದೈತೆ
ನಿನ್ನ ಸ್ನೇಹಕೆ ಬಾಳು ನಲಿದು ಆಸೆ ಗಂಧ ಹರಡೈತೆ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ...

ಮರೆಯದ ಮೋಹ ಉಕ್ಕಿ ತೇಲಿ ತೇಲಿ ಮೊರೆದೈತೆ
ಇಂಗದ ದಾಹ ಬೇಗೆ ಕಾದೂ ಕಾದೂ ಕರೆದೈತೆ
ನಿನ್ನ ಸೇರುವ ರಾಗ ರಂಗಿಗೆ ನನ್ನ ಮನಸು ತೆರೆದೈತೆ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ..

Sunday, May 9, 2010

ಓ ಗುಣವಂತ ಓ ಗುಣವಂತ

ಚಿತ್ರ: ಮಸಣದ ಹೂವು
ಸಾಹಿತ್ಯ: ವಿಜಯನಾರಸಿಂಹ
ಸಂಗೀತ : ವಿಜಯಭಾಸ್ಕರ
ಹಿನ್ನಲೆ ಗಾಯನ: ಎಸ್.ಜಾನಕಿ

ಓ ಗುಣವಂತ ಓ ಗುಣವಂತ
ನಿನ್ನಾ ಗುಣಗಾನ ಮಾಡಲು ಪದಗಳೇ ಸಿಗುತ್ತಿಲ್ಲಾ
ಪದಗಳೇ ಸಿಗುತ್ತಿಲ್ಲ

ದಾರಿದೀಪ ತೋರುತಾ, ತೋರುತಾ
ಕರುಣೆ ಕಿರಣ ಬೀರುತಾ, ಬೀರುತಾ
ಬಂದೆ ನೀನು ಓ ಸ್ನೇಹಿತ, ಸ್ನೇಹಿತ
ನನ್ನ ಬಾಳು ಬೆಳಗಿದೆ, ಬೆಳಗಿದೆ

ಓ ಗುಣವಂತ ಓ ಗುಣವಂತ...

ಹೃದಯ ನಿನಗೆ ಸೋತಿದೆ, ಸೋತಿದೆ
ನುಡಿಗೆ ನಾಲಿಗೆ ನಾಚಿದೆ, ನಾಚಿದೆ
ಬಗೆಬಗೆ ಭಾವ ಮೂಡಿದೆ, ಮೂಡಿದೆ
ಮನವು ನಿನ್ನೇ ಹೊಗಳಿದೆ, ಹೊಗಳಿದೆ

ಓ ಗುಣವಂತ ಓ ಗುಣವಂತ...

ಪ್ರೇಮದಾಸೆ ತೋರಲಾರೆ, ತೋರಲಾರೆ
ಪ್ರಣಯ ಲೀಲೆ ಆಡಲಾರೆ, ಆಡಲಾರೆ
ಭಾಷೆಯ ಮೀರಿದೆ ಓ ಭಾವನೆ, ಕಾಮನೆ
ಆಸೆಯ ಮೀರಿದೆ ಮೋಹದ ಪ್ರೇರಣೆ

ಓ ಗುಣವಂತ ಓ ಗುಣವಂತ

Wednesday, May 5, 2010

ಅಮ್ಮ ಎಂದರೆ ಏನೋ ಹರುಷವು

ಚಿತ್ರ: ಕಳ್ಳ ಕುಳ್ಳ
ಸಾಹಿತ್ಯ : ಚಿ.ಉದಯಶಂಕರ್
ಸಂಗೀತ : ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಡಾ.ಪಿ.ಬಿ.ಶ್ರೀನಿವಾಸ್, ಕೃಷ್ಣಮೂರ್ತಿ



ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು
ಅಮ್ಮಾ ಎನ್ನಲೂ ಎಲ್ಲಾ ಮರೆತೆವು
ಎಂದೂ ಕಾಣದಾ ಸುಖವಾ ಕಂಡೆವು.

ಮೂರು ನದಿಯು ಸೇರಿ ಹರಿದು ಬಂದರೇನು?
ಜನರು ಅದರ ರಭಸ ಕಂಡು ಕಡಲು ಎನುವರೇನು?
ಕೋಟಿ ದೇವರೆಲ್ಲಾ ಕೂಡಿ ನಿಂತರೇನು
ತಾಯಿ ಹಾಗೆ ಪ್ರೀತಿ ತೋರಿ ಸನಿಹ ಬರುವರೇನು
ಎಂದೋ ಕನಸಲಿ ಕಂಡಾ ನೆನಪಿದೆ
ಇಂದು ನಿನ್ನ ಕಾಣೋ ಆಸೆ ಎದೆಯಾ ತುಂಬಿದೆ

ಅಮ್ಮ ಎಂದರೆ ಏನೋ ಹರುಷವು...

ನನ್ನೀ ವಯಸು ಮರೆವೆ ಮಗುವೇ ಆಗಿ ಬಿಡುವೆ
ಅಮ್ಮ ನಿನ್ನ ಕಂದ ಬಂದೆ ನೋಡು ಎನ್ನುವೆ
ನನ್ನೀ ತೋಳಿನಲ್ಲಿ ಅವಳ ಬಳಸಿ ನಲಿವೆ
ಇನ್ನೂ ನಿನ್ನ ಎಂದೂ ಬಿಟ್ಟು ಇರೆನು ಎನ್ನುವೆ
ತಾಯಿ ಮಡಿಲಲಿ ನಾವು ಹೂಗಳು
ನಮ್ಮಾ ಬಾಳೀಗೆ ಅವಳೇ ಕಂಗಳು.

ಅಮ್ಮ ಎಂದರೆ ಏನೋ ಹರುಷವು...

Tuesday, May 4, 2010

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ

ಚಿತ್ರ: ಕೆರಳಿದ ಸಿಂಹ
ಸಂಗೀತ: ಸತ್ಯಂ
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್, ಡಾ.ಪಿ.ಬಿ.ಶ್ರೀನಿವಾಸ್

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಬಾಳಲೆ ಬೇಕು ಈ ಮನೆ ಬೆಳಕಾಗಿ
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಬಾಳಲೆ ಬೇಕು ಈ ಮನೆ ಬೆಳಕಾಗಿ
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ

ಬಾಡದ ತಾವರೆ ಹೂವಿನ ಹಾಗೆ ಎಂದಿಗು ಆರದ ಜ್ಯೋತಿಯ ಹಾಗೆ
ಗೋಪುರವೇರಿದ ಕಲಶದ ಹಾಗೆ ಆ ಧೃವ ತಾರೆಯೆ ನಾಚುವ ಹಾಗೆ
ಜೊತೆಯಲಿ ಎಂದೆಂದು ನೀನಿರಬೇಕು ಬೇರೆ ಏನು ಬೇಡೆವು ನಾವು

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ...

ಸಂಜೆಯ ಗಾಳಿಯ ತಂಪಿನ ಹಾಗೆ ಮಲ್ಲಿಗೆ ಹೂವಿನ ಕಂಪಿನ ಹಾಗೆ
ಜೀವವ ತುಂಬುವ ಉಸಿರಿನ ಹಾಗೆ ನಮ್ಮನು ಸೇರಿ ಎಂದಿಗು ಹೀಗೆ
ನಗುತಲಿ ಒಂದಾಗಿ ನೀನಿರಬೇಕು ನಿನ್ನ ನೆರಳಲಿ ನಾವಿರಬೇಕು

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ...

ಸಾವಿರ ನದಿಗಳು ಸೇರಿದರೇನು ಸಾಗರಕೆ ಸಮನಾಗುವುದೇನು
ಶತಕೋಟಿ ದೇವರು ಹರಸಿದರೇನು ಅಮ್ಮನ ಹರಕೆಗೆ ಸರಿಸಾಟಿಯೇನು
ತಾಯಿಗೆ ಆನಂದ ತಂದರೆ ಸಾಕು ಬೇರು ಪೂಜೆ ಏತಕೆ ಬೇಕು

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ...

Monday, May 3, 2010

ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ

ಚಿತ್ರ : ಭಲೇಜೋಡಿ
ರಚನೆ: ಚಿ.ಉದಯಶಂಕರ್
ಸಂಗೀತ: ಆರ್. ರತ್ನ
ಹಿನ್ನಲೆ ಗಾಯನ: ಡಾ.ಪಿ.ಬಿ.ಶ್ರೀನಿವಾಸ್



ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ
ನಾ ಅಮ್ಮ ಎಂದಾಗ ಏನು ಸಂತೋಷವು
ನಿನ್ನ ಕಂಡಾಗ ಮನಕೇನು ಆನಂದವು
ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ ..

ಹಾಲಿನ ಸುಧೆಯು ನಿನ್ನಯ ಮನಸು
ಜೇನಿನ ಸವಿಯು ನಿನ್ನ ಮಾತು..
ಪುಣ್ಯದ ಫಲವೊ
ದೇವರ ವರವೊ
ಸೇವೆಯ ಭಾಗ್ಯ ನನ್ನದಾಯ್ತು

ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ ..

ತಾಯಿಯ ಮಮತೆ ಕಂಡ ದೇವನು
ಅಡಗಿದ ಎಲ್ಲೊ ಮರೆಯಾಗಿ
ತಾಯಿಯ ಶಾಂತಿಗೆ ಧರಣಿಯು ನಾಚಿ
ಮೌನದಿ ನಿಂತಳು ತಲೆಬಾಗಿ


ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ ..

Sunday, May 2, 2010

ಅಮ್ಮ ನಿನ್ನ ತೋಳಿನಲ್ಲಿ ಕಂದ ನಾನು

ಚಿತ್ರ: ಕಪ್ಪು ಬಿಳುಪು
ಸಾಹಿತ್ಯ : ಆರ್.ಎನ್. ಜಯಗೋಪಾಲ್
ಸಂಗೀತ : ಆರ್. ರತ್ನ
ಹಿನ್ನಲೆ ಗಾಯನ : ಪಿ.ಸುಶೀಲ



ಅಮ್ಮ ನಿನ್ನ ತೋಳಿನಲ್ಲಿ ಕಂದ ನಾನು
ನಿನ್ನ ಸಂಗ ಆಡಲೆಂದು ಬಂದೆ ನಾನು
ಓಹೋ...ಓಹೋ...........

ಸಣ್ಣ ಸಣ್ಣ ಹೂವಿನಲ್ಲೂ ಕಂಡೆ ನೀನು
ಬಣ್ಣದ ಬಣ್ಣದ ಚಿಟ್ಟೆಯಲ್ಲೂ ನೀನೆ ನೀನು

ಅಮ್ಮ ನಿನ್ನ ತೋಳಿನಲ್ಲಿ ಕಂದ ನಾನು...

ನೀನು ಇತ್ತ ಹಣ್ಣುಗಳೆ ಅನ್ನ ನನಗೆ
ನಿನ್ನ ಮಡಿಲಿನಲೇ ನನ್ನ ಹಾಸಿಗೆ
ಬೀಸಿ ಬಂದ ಗಾಳಿಯಲ್ಲೂ ನಿನ್ನ ಮಾಯೆ
ಹರಿಯುವ ನದಿಯಲೂ ನಿನ್ನ ಛಾಯೆ

ಅಮ್ಮ ನಿನ್ನ ತೋಳಿನಲ್ಲಿ ಕಂದ ನಾನು...

ಊರುಬೇಡ ಕೇರಿಬೇಡ ಯಾರೂ ಬೇಡಾ
ಅಮ್ಮ ಒಮ್ಮೆ ಕಣ್ಣ ಬಿಟ್ಟು ನನ್ನ ನೋಡಾ
ತಾಯಿತಂದೆ ಬಂಧುಬಳಗ ನೀನೇ ಎಲ್ಲಾ
ನಿನಗಿಂತ ಬೇರೆ ದೇವರಿಲ್ಲಾ

ಅಮ್ಮ ನಿನ್ನ ತೋಳಿನಲ್ಲಿ ಕಂದ ನಾನು...