Showing posts with label ಎಲ್. ವೈದ್ಯನಾಥನ್. Show all posts
Showing posts with label ಎಲ್. ವೈದ್ಯನಾಥನ್. Show all posts

Sunday, October 3, 2010

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ

ಚಿತ್ರ: ಅನುಭವ
ಸಾಹಿತ್ಯ: ವಿ.ಮನೋಹರ್
ಸಂಗೀತ: ಎಲ್. ವೈದ್ಯನಾಥನ್
ಗಾಯನ: ವಾಣಿ ಜಯರಾಮ್




ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ
ನೀ ಅರಿಯದೆ ಹೋದೆ ಪ್ರೇಮದ ನಾ ಸಂದೇಶವ ತಂದಾಗ
ನೀ ಶೃತಿಯ ಮಿಡಿದಾಗ ಹಾಡಿದೆ ನಾ ಹುಸಿ ರಾಗ
ತೋರಿದೆ ನೀ ಅನುರಾಗ ಗಮನಿಸದೆ ತೆರಳಿದೆ ನಾ

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ...

ನಲ್ಲ ಬಳಿಸಾರಿ ಮೆಲ್ಲ ಬಿಗಿದಾಗ ತಳ್ಳಿ ದೂರಾದೆ ಅರಿಯದೆ ನಾ
ಮದನ ನೀನಾಗಿ ಮುದದಿ ತೆರೆದಾಗ ರತಿಯ ಸವಿಲೀಲೆ ಮರೆತೆನು ನಾ
ಹೂವಿನ ಹಾಸಿಗೆ ನೀ ಹಾಸಿ ಮೋಗದಿ ನನ್ನನು ಕರೆದಾಗ
ಮಾಡಿದೆ ನಾನು ಪರಿಹಾಸ ನೀಡದೆ ನಿನಗೆ ಉಲ್ಲಾಸ
ಸವಿ ಇರುಳ ಹೊಂಗನಸ ಮುರಿದೆನು ನಾ

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ...

ಮೇಘ್ಹ ಸರಿದಾಗ ತಾರೆ ಹೊಳೆದಾಗ ಚಂದ್ರ ಮರೆಯಾದ ನನ್ನ ತೊರೆದ
ಯಾರ ಬಳಿನಾನು ನೋವ ನುಡಿದೇನು ಇನಿಯ ಮರೆತಾಗ ಸಹಿಸೆನು ನಾ
ಬಾಳೆನು ಚಿಂತೆಯ ಪಾಲಾಇ ದುಂಬಿಯ ಕಾಣದ ಹೂವಾಗಿ
ತಾಳೆನು ನಾನು ಏಕಾಂತ ಬರುವೆನೆಇನ್ನ ಓ ಕಾಂತ
ಕೊರಗುತಿಹೆ ಮರುಗುತಿಗೆ ವಿರಹದಿ ನಾ

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ...

Tuesday, July 8, 2008

ಸವಿನೆನಪುಗಳು ಬೇಕು ಸವಿಯಲೀ ಬದುಕು

ಚಿತ್ರ: ಅಪರಿಚಿತ
ಸಂಗೀತ: ಎಲ್. ವೈದ್ಯನಾಥನ್
ಹಿನ್ನಲೆ ಗಾಯನ: ಎಸ್. ಜಾನಕಿ



ಸವಿನೆನಪುಗಳು ಬೇಕು ಸವಿಯಲೀ ಬದುಕು
ಕಹಿನೆನಪು ಸಾಕೊಂದು ಮಾಸಲೀ ಬದುಕು
ಬೆಂಬಿಡದ ಆ ನೆನಪು ಮರುಕಳಿಸಿ ದಿನವೆಲ್ಲ
ಕಾಡುತಿದೆ ಮನವ

ಸವಿನೆನಪುಗಳು ಬೇಕು ಸವಿಯಲೀ ಬದುಕು...

ಪ್ರಿಯತಮನ ಒಲವಿಂದ ಕನಸುಗಳು ಮೂಡಿ
ಇನಿಯನ ಎದೆಗೊರಗಿ ಆಸರೆಯ ಬೇಡಿ
ಸರಸ ಸವಿಯ ಬಯಸಿದೆನು ನಾನು
ವಿರಹ ವಿಫಲ ಫಲಿಸಿದವು ನನಗೆ
ಇನಿಯನ ಎದೆ ಬಡಿತ ಗುಂಡಿನ ದನಿಗಿರಿದು
ಮಾಸುತಿದೆ ಕನಸು

ಸವಿನೆನಪುಗಳು ಬೇಕು ಸವಿಯಲೀ ಬದುಕು...

ಬೀಸುತಿಹ ತಂಗಾಳಿ ಬಿಸಿಯಾಗಿ ಕಾಡಿ
ನೆನಪಿನ ಭೀತಿಯಲಿ ನಾ ಬಂದಿಯಾಗಿ
ಮನಸು ಹೃದಯ ನೊಂದು ನೋವಾಗಿದೆ
ಒಲವು ನಲಿವು ಮೂಡಿ ಮಸುಕಾಗಿ
ಅರಳುವ ಹೂವೊಂದು ಕಮರುವ ಭಯದಲೀ
ಸಾಗುತಿದೆ ಬದುಕು

ಸವಿನೆನಪುಗಳು ಬೇಕು ಸವಿಯಲೀ ಬದುಕು...