Showing posts with label ಎಸ್.ಜಾನಕಿ. Show all posts
Showing posts with label ಎಸ್.ಜಾನಕಿ. Show all posts

Thursday, August 12, 2010

ಜೀವ ಹೂವಾಗಿದೆ ಭಾವ ಜೇನಾಗಿದೆ

ಚಿತ್ರ: ನೀ ನನ್ನ ಗೆಲ್ಲಲಾರೆ
ಸಾಹಿತ್ಯ: ಚಿ.ಉದಯಶಂಕರ್
ಸಂಗೀತ: ಇಳಯ ರಾಜ
ಹಿನ್ನಲೆ ಗಾಯನ: ಡಾ.ರಾಜಕುಮಾರ್ ಮತ್ತು ಎಸ್.ಜಾನಕಿ




ಐ ಲವ್ ಯೂ, ಐ ಲವ್ ಯೂ
ಐ ಲವ್ ಯೂ, ಐ ಲವ್ ಯೂ
ಜೀವ ಹೂವಾಗಿದೆ ಭಾವ ಜೇನಾಗಿದೆ
ಬಾಳು ಹಾಡಾಗಿದೆ ನಿನ್ನ ಸೇರಿ ನಾನು
ಸಂಜೆ ತಂಗಾಳಿ ತಂಪಾಗಿ ಬೀಸಿ
ಹೂವ ಕಂಪನ್ನು ಹಾದಿಗೇ ಹಾಸಿ
ತಂದಿದೆ ಹಿತವ ನಮಗಾಗಿ
ತಂದಿದೆ ಹಿತವ ನಮಗಾಗಿ
ಜೋಡಿ ಬಾನಾಡಿ, ಮೇಲೆ ಹಾರಾಡಿ
ತೇಲಾಡಿ ಓಲಾಡಿ ನಲಿವಂತೆ,
ನಾವು ಆಡೋಣ ಇನ್ನೇಕೆ ಬಾ ಚಿಂತೆ
ಜೀವ ಹೂವಾಗಿದೆ ಭಾವ ಜೇನಾಗಿದೆ...
ಇನ್ನು ನಿನ್ನಾಸೆ ನನ್ನಾಸೆ ಒಂದೇ
ಎಂದು ನಾವಾಡೋ ಮಾತೆಲ್ಲ ಒಂದೇ
ಬಯಕೆಯು ಒಂದೇ ಗುರಿಯೊಂದೆ
ಬಯಕೆಯು ಒಂದೇ ಗುರಿಯೊಂದೆ
ನಿನ್ನ ಚೆಲುವಿಂದ ನಿನ್ನ ಒಲವಿಂದೆ
ನನ್ನಲ್ಲಿ ನೀ ತಂದೆ ಆನಂದ
ಈ ಸಂತೋಷ ಸೌಭಾಗ್ಯ ನಿನ್ನಿಂದ
ಜೀವ ಹೂವಾಗಿದೆ ಭಾವ ಜೇನಾಗಿದೆ...

Thursday, July 15, 2010

ಒಲಿದ ಜೀವ ಜೊತೆಯಲಿರಲು ಬಾಳು ಸುಂದರ

ಚಿತ್ರ:ಬೆಂಕಿಯ ಬಲೆ
ಸಾಹಿತ್ಯ : ಚಿ.ಉದಯಶಂಕರ್
ಸಂಗೀತ : ರಾಜನ್-ನಾಗೇಂದ್ರ
ಗಾಯನ : ಎಸ್.ಪಿ.ಬಾಲಸುಬ್ರಮಣ್ಯಂ ಮತ್ತು ಎಸ್.ಜಾನಕಿ






ಒಲಿದ ಜೀವ ಜೊತೆಯಲಿರಲು ಬಾಳು ಸುಂದರ
ಭವ್ಯವಾದ ಪ್ರೇಮ ಮಂದಿರ

ನಯನ ನಯನ ಬೆರೆತ ಸಮಯ ಬಾನಲ್ಲಿ ತೇಲಾಡಿದಂತೆ
ನಯನ ನಯನ ಬೆರೆತ ಸಮಯ ಬಾನಲ್ಲಿ ತೇಲಾಡಿದಂತೆ
ಕರವ ಹಿಡಿದಾಗ ನಗುತ ನಡೆವಾಗ ಭುವಿಯೇ ಸ್ವರ್ಗದಂತೆ

ಸನಿಹ ಕುಳಿತು ನುಡಿವ ನುಡಿಯು ಇಂಪಾದ ಹಾಡಿನಂತೆ
ಸನಿಹ ಕುಳಿತು ನುಡಿವ ನುಡಿಯು ಇಂಪಾದ ಹಾಡಿನಂತೆ
ಕನಸು ಕಣ್ಣಲ್ಲಿ ಸೊಗಸು ಎದುರಲ್ಲಿ ಬದುಕು ಕವಿತೆಯಂತೆ
ಕಣ್ಣೀರು ಪನ್ನೀರ ಹನಿಯಂತೆ

ಒಲಿದ ಜೀವ ಜೊತೆಯಲಿರಲು ಬಾಳು ಸುಂದರ...

ಉರಿವ ಬಿಸಿಲ ಸುರಿವ ರವಿಯೇ ತಂಪಾದ ಚಂದ್ರನಂತೆ
ಉರಿವ ಬಿಸಿಲ ಸುರಿವ ರವಿಯೇ ತಂಪಾದ ಚಂದ್ರನಂತೆ
ತುಳಿದ ಮುಳ್ಳೆಲ್ಲ ಅರಳಿ ಹೂವಂತೆ ಹಾದಿ ಮಿಟ್ಟಿಯಂತೆ

ಮೊಗದಿ ಹರಿವ ಬೆವರ ಹನಿಯು ಓಂದೊಂದು ಮುತ್ತಿನಂತೆ
ಮೊಗದಿ ಹರಿವ ಬೆವರ ಹನಿಯು ಓಂದೊಂದು ಮುತ್ತಿನಂತೆ
ಏನೊ ಉಲ್ಲಾಸ ಏನೊ ಸಂತೋಷ ಮರೆತು ಎಲ್ಲ ಚಿಂತೆ
ಒಲವಿಂದ ದಿನವೊಂದು ಕ್ಷಣವಂತೆ

ಒಲಿದ ಜೀವ ಜೊತೆಯಲಿರಲು ಬಾಳು ಸುಂದರ...

Monday, May 17, 2010

ಒಲುಮೇ ಪೂಜೆಗೆಂದೆ ಕರೆಯಾ ಕೇಳಿ ಬಂದೆ

ಚಿತ್ರ: ಅನುಪಮ
ಸಾಹಿತ್ಯ: ದೊಡ್ಡರಂಗೇಗೌಡ
ಸಂಗೀತ: ಅಶ್ವಥ್ ಮತ್ತು ವೈದಿ
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಎಸ್.ಜಾನಕಿ



ಒಲುಮೇ ಪೂಜೆಗೆಂದೆ ಕರೆಯಾ ಕೇಳಿ ಬಂದೆ
ರಾಗ ತಾನ ಪ್ರೇಮಗಾನ ಸಂಜೀವನ

ಮಮತೆ ಮೀಟಿ ಮಿಲನ ಕಂಡೇ
ನಿನ್ನ ಸ್ನೇಹ ಸೌಭಾಗ್ಯ ಮಿಂದೇ
ಹರೆಯಾ ತೂಗಿ ಸನಿಹಾ ಬಂದೇ
ಎಲ್ಲ ಪ್ರೀತಿ ಸನ್ಮೋಹ ತಂದೇ
ಹರುಷಾ ತಂದಾ ಹಾದಿಯೆ ಚಂದಾ
ಒಲವಿನಾಸರೆ ರೋಮಾಂಚಬಂಧಾ

ಒಲುಮೇ ಪೂಜೆಗೆಂದೆ ಕರೆಯಾ ಕೇಳಿ ಬಂದೆ...

ಜೊತೆಯಾ ಸೇರೀ ಬರುವೆ ನಾನೂ
ನನ್ನ ಬಾಳ ಬಂಗಾರ ನೀನು
ಬೆಳಕು ನೀನೂ ಕಿರಣಾ ನಾನೂ
ನಿನ್ನ ಕೂಡಿ ಹೊಂಬಿಸಿಲ ಬಾನು
ನಿನಗೇ ನಾನು ನನಗೆ ನೀನು
ನಿನಗೇ ನಾನು ನನಗೆ ನೀನು
ಪ್ರೇಮ ಜೀವನ ಎಂದೆಂದು ಜೇನು

ಒಲುಮೇ ಪೂಜೆಗೆಂದೆ ಕರೆಯಾ ಕೇಳಿ ಬಂದೆ...

Saturday, May 15, 2010

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ

ಚಿತ್ರ : ಪರಸಂಗದ ಗೆಂಡೆತಿಮ್ಮ
ಸಾಹಿತ್ಯ: ದೊಡ್ಡರಂಗೇಗೌಡ
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಜಾನಕಿ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನಾ ನೋಟ ಕೂಡಿದಾಗ ಕಂಡೆ ಅನುರಾಗ

ಮನಸಿನ ಚಿಲುಮೆಯಾಗೆ ಮುಗಿಯದಾಸೆ ಚಿಮ್ಮೈತೆ
ಹೃದಯದ ಕುಲುಮೆಯಾಗೆ ನೂರು ಬಯಕೆ ಸಿಡಿದೈತೆ
ನಿನ್ನ ಕಾಣುವ ಬಾವ ಬೆಳೆದು ನನ್ನ ಕನಸು ಕಡೆದೈತೆ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ...

ತೆರೆಯದ ಬಯಕೆ ಬಾನು ದೂರ ದೂರ ಸರಿದೈತೆ
ಹರೆಯದ ಹಂಬಲ ಗಂಗೆ ಬಾಗಿ ಬಳುಕಿ ಹರಿದೈತೆ
ನಿನ್ನ ಸ್ನೇಹಕೆ ಬಾಳು ನಲಿದು ಆಸೆ ಗಂಧ ಹರಡೈತೆ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ...

ಮರೆಯದ ಮೋಹ ಉಕ್ಕಿ ತೇಲಿ ತೇಲಿ ಮೊರೆದೈತೆ
ಇಂಗದ ದಾಹ ಬೇಗೆ ಕಾದೂ ಕಾದೂ ಕರೆದೈತೆ
ನಿನ್ನ ಸೇರುವ ರಾಗ ರಂಗಿಗೆ ನನ್ನ ಮನಸು ತೆರೆದೈತೆ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ..

Sunday, May 9, 2010

ಓ ಗುಣವಂತ ಓ ಗುಣವಂತ

ಚಿತ್ರ: ಮಸಣದ ಹೂವು
ಸಾಹಿತ್ಯ: ವಿಜಯನಾರಸಿಂಹ
ಸಂಗೀತ : ವಿಜಯಭಾಸ್ಕರ
ಹಿನ್ನಲೆ ಗಾಯನ: ಎಸ್.ಜಾನಕಿ

ಓ ಗುಣವಂತ ಓ ಗುಣವಂತ
ನಿನ್ನಾ ಗುಣಗಾನ ಮಾಡಲು ಪದಗಳೇ ಸಿಗುತ್ತಿಲ್ಲಾ
ಪದಗಳೇ ಸಿಗುತ್ತಿಲ್ಲ

ದಾರಿದೀಪ ತೋರುತಾ, ತೋರುತಾ
ಕರುಣೆ ಕಿರಣ ಬೀರುತಾ, ಬೀರುತಾ
ಬಂದೆ ನೀನು ಓ ಸ್ನೇಹಿತ, ಸ್ನೇಹಿತ
ನನ್ನ ಬಾಳು ಬೆಳಗಿದೆ, ಬೆಳಗಿದೆ

ಓ ಗುಣವಂತ ಓ ಗುಣವಂತ...

ಹೃದಯ ನಿನಗೆ ಸೋತಿದೆ, ಸೋತಿದೆ
ನುಡಿಗೆ ನಾಲಿಗೆ ನಾಚಿದೆ, ನಾಚಿದೆ
ಬಗೆಬಗೆ ಭಾವ ಮೂಡಿದೆ, ಮೂಡಿದೆ
ಮನವು ನಿನ್ನೇ ಹೊಗಳಿದೆ, ಹೊಗಳಿದೆ

ಓ ಗುಣವಂತ ಓ ಗುಣವಂತ...

ಪ್ರೇಮದಾಸೆ ತೋರಲಾರೆ, ತೋರಲಾರೆ
ಪ್ರಣಯ ಲೀಲೆ ಆಡಲಾರೆ, ಆಡಲಾರೆ
ಭಾಷೆಯ ಮೀರಿದೆ ಓ ಭಾವನೆ, ಕಾಮನೆ
ಆಸೆಯ ಮೀರಿದೆ ಮೋಹದ ಪ್ರೇರಣೆ

ಓ ಗುಣವಂತ ಓ ಗುಣವಂತ

Wednesday, April 28, 2010

ಆಕಾಶ ದೀಪವು ನೀನು

ಚಿತ್ರ: ಪಾವನ ಗಂಗಾ
ಸಾಹಿತ್ಯ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಜಾನಕಿ



ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು
ಮರೆಯಾದಾಗ ನೋವೇನು

ಕಂಡಂದೆ ಕುಣಿಯಿತು ಮನವು
ಹೂವಾಗಿ ಅರಳಿತು ತನುವು
ಹೃದಯದ ವೀಣೆಯನು ಹಿತವಾಗಿ ನುಡಿಸುತಲಿ
ಆನಂದ ತುಂಬಲು ನೀನು
ನಾ ನಲಿವೆನು

ಆಕಾಶ ದೀಪವು ನೀನು...

ಅನುರಾಗ ಮೂಡಿದ ಮೇಲೆ
ನೂರಾರು ಬಯಕೆಯ ಮಾಲೆ
ಹೃದಯವು ಧರಿಸಿದೆ
ಈ ಜೀವ ಸೋಲುತಿದೆ
ಸಂಗಾತಿ ಆದರೆ ನೀನು
ನಾ ಉಳಿವೆನು

ಆಕಾಶ ದೀಪವು ನೀನು...

ಹೂವಾದ ಆಸೆಯೆಲ್ಲ
ಮುಳ್ಳಾಗಿ ಹೋಯಿತಲ್ಲ
ಜೀವ ನೋವ ತಾಳದಲ್ಲ
ಸುಖ ಶಾಂತಿ ಇನ್ನಿಲ್ಲ
ನೆಮ್ಮದಿಯ ಕಾಣೆನು
ನಾ ಸೋತೆನು

ಆಕಾಶ ದೀಪವು ನೀನು...

Sunday, March 7, 2010

ನೀ ನಡೆವ ಹಾದಿಯಲ್ಲಿ ನಗೆ ಹೂವು ಬಾಡದಿರಲಿ...

ಚಿತ್ರ:ಬಂಗಾರದ ಹೂವು
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಪಿ.ಸುಶೀಲ, ಎಸ್.ಜಾನಕಿ



ನೀ ನಡೆವ ಹಾದಿಯಲ್ಲಿ ನಗೆ ಹೂವು ಬಾಡದಿರಲಿ
ಈ ಬಾಳ ಬುತ್ತಿಯಲಿ ಸಿಹಿ ಪಾಲು ನಿನಗಿರಲಿ
ಕಹಿ ಎಲ್ಲ ನನಗಿರಲಿ

ಸಹನೆ ಮೀರಿ ಕಾಣದ ಕೈಗೆ ಮಾಡಿತೇನೋ ಮೈಯಿಗೆ ಮುಯ್ಯಿ
ಯಾರು ಇದಕೆ ಹೊಣೆಯೇ ಇಲ್ಲ ಇರಲಿ ನನಗೆ ನಿಂದನೆ ಎಲ್ಲ
ವಿಧಿಯು ಹೂಡಿ ಒಳಸಂಚನ್ನು ತೊರೆಯಿತೆನ್ನ ಹೊಂಗನಸನ್ನು
ನೋವ ನುಂಗಿ ಬಾಳುವೆ ನಾನು ಸುಖವು ನಿನ್ನ ಕಾಡಿತೇನು
ಈ ಬೇಗೆ ನೀಗಲಿ ಮನಸು ಹಗುರವಾಗಲಿ

ನೀ ನಡೆವ ಹಾದಿಯಲ್ಲಿ ನಗೆ ಹೂವು ಬಾಡದಿರಲಿ...

ಏನೇನೊ ಬಯಸಿತು ಮನಸು ಕೈ ಸೇರೆ ಎಲ್ಲಾ ಸೊಗಸು
ಕೈ ಜಾರೆ ಎಲ್ಲಾ ಕನಸು ಆಸೆ ಮರೆತರೇ ಲೇಸು
ನನ್ನ ಕಣ್ಣ ನೀರಿನಲ್ಲಿ ನಿನ್ನ ಬಿಂಬ ಕಾಣುತಿರಲಿ
ಈ ಬಾಳು ಇಂತೆ ಇರಲಿ ನಿನ್ನ ನೆನವು ಚಿರವಾಗಿರಲಿ
ಈ ಬೇಗೆ ನೀಗಲಿ ಮನಸು ಹಗುರವಾಗಲಿ

ನೀ ನಡೆವ ಹಾದಿಯಲ್ಲಿ ನಗೆ ಹೂವು ಬಾಡದಿರಲಿ...

Wednesday, March 3, 2010

ಮಧುಮಾಸ ಚಂದ್ರಮಾ ನೈದಿಲೆಗೆ ಸಂಭ್ರಮಾ

ಚಿತ್ರ: ವಿಜಯವಾಣಿ
ಗೀತರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ:ಎಸ್.ಜಾನಕಿ ಮತ್ತು ವಾಣಿ ಜಯರಾಮ್


ಮಧುಮಾಸ ಚಂದ್ರಮಾ ನೈದಿಲೆಗೆ ಸಂಭ್ರಮಾ
ಒಲವಿನಾ ಲೋಕಕೇ ನೀ ತಂದೇ ಪೌರ್ಣಿಮಾ

ನಾ ಪ್ರೇಮದರಮನೆಯಲ್ಲೀ ವೈಭೋಗ ಸಿರಿಯನು ಕಂಡೇ
ನನ್ನೆದೆಯ ಸಿಂಹಾಸನದೀ ನೀ ರಾಜ್ಯವಾಳಿದೇ
ನೀ ನನ್ನ ಬಾಳಿನ ಪುಟದೇ ಅನುರಾಗ ಕವಿತೆಯ ಬರೆದೇ
ನಾನಾಗ ಭಾವದ ಹೊಳೆಯಾ ಅಲೆಯಲ್ಲಿ ತೇಲಿದೇ
ಅಲೆಯಲ್ಲಿ ತೇಲಿ ತೇಲಿದೇ

ಮಧುಮಾಸ ಚಂದ್ರಮಾ ನೈದಿಲೆಗೆ ಸಂಭ್ರಮಾ...

ರಸಪೂರ್ಣ ಮೈತ್ರಿಯ ಸಮಯಾ ನೂರಾಸೆ ಕಡಲಿದು ಹೃದಯಾ
ನೀ ನಡೆಸು ಅಂಬಿಗನಾಗಿ ಒಲವೆಂಬ ನೌಕೆಯಾ
ಬಂಗಾರ ತೇರನು ಏರೀ ನಾ ನಿನ್ನ ಸಂಗದಿ ಬೆರೆವೆ
ಸುಖವೆಂಬ ಉಯ್ಯಾಲೆಯಲೀ ಸಖ ನಿನ್ನಾ ತೂಗುವೇ
ಹಾಯಾಗಿ ತೂಗಿ ಕೂಗುವೇ

ಮಧುಮಾಸ ಚಂದ್ರಮಾ ನೈದಿಲೆಗೆ ಸಂಭ್ರಮಾ...

Tuesday, March 2, 2010

ಜೋ ಜೋ ಲಾಲೀ ನಾ ಹಾಡುವೇ

ಚಿತ್ರ: ಚಿನ್ನಾ ನಿನ್ನಾ ಮುದ್ದಾಡುವೆ
ಸಂಗೀತ: ಸಲೀಲ್ ಚೌಧರಿ
ಹಿನ್ನಲೆ ಗಾಯನ: ಕೆ.ಜೆ.ಏಸುದಾಸ್, ಎಸ್.ಜಾನಕಿ, ಅನಿತಾ(ಅಂತರಾ) ಚೌಧರಿ







ಜೋ ಜೋ ಲಾಲೀ ನಾ ಹಾಡುವೇ
ಚಿನ್ನಾ ನಿನ್ನಾ ಮುದ್ದಾಡುವೇ
ಹೂವಂತ ಕನಸೂ ತಾ ಮೂಡಿ ಬರಲಿ
ನಗುವಾ ಅಳುವಾ ಕಣ್ಣಲ್ಲಿ ಇಂದೂ

ಜೋ ಜೋ ಲಾಲೀ ನಾ ಹಾಡುವೇ...

ನಿದಿರಾ ದೇವೀ ಬಾ ಮೆಲ್ಲಗೇ
ತಾರೆಯಿಂದಾ ಈ ಭೂಮಿಗೇ
ಸಾವಿರ ರಂಗಿನ ಮಳೆಬಿಲ್ಲಿನಾ
ಮಾಲೆಯ ಧರಿಸೀ ಬಾ ಇಲ್ಲಿಗೇ
ಚಿನ್ನದ ತೇರಲಿ ಒಲವಿಂದ ಬಂದು
ತಾರೇ ಮುತ್ತು ಕಂದಂಗೆ ಇಂದು

ಜೋ ಜೋ ಲಾಲೀ ನಾ ಹಾಡುವೇ...

ಚಿಪ್ಪೀ ಮಡಿಲಾ ಮುತ್ತಂತೆಯೇ
ದೀಪದೆ ಜ್ಯೋತಿ ಇರುವಂತೆಯೇ
ಕಿರಣದೇ ಕಾಂತಿ ಕುಳಿತಂತೆಯೇ
ಮೊಗ್ಗಲಿ ಸೌರಭ ಇರುವಂತೆಯೇ
ರಾತ್ರಿ ಸೆರಗೂ ಹಾಸಿರಲಿಂದೂ
ಮಲಗೂ ಮಮತೆ ಮಡಿಲಲ್ಲಿ ಬಂದೂ

ಜೋ ಜೋ ಲಾಲೀ ನಾ ಹಾಡುವೇ...

Monday, March 1, 2010

ತಾರೆಯು ಬಾನಿಗೆ ತಾವರೆ ನೀರಿಗೆ...

ಚಿತ್ರ: ಬಿಳಿಗಿರಿಯ ಬನದಲ್ಲಿ
ಗೀತರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಪಿ, ಎಸ್.ಜಾನಕಿ




ತಾರೆಯು ಬಾನಿಗೆ ತಾವರೆ ನೀರಿಗೆ
ಹೂವೆಲ್ಲ ವನದೇವಿ ಮುಡಿಗೆ
ನೀ ನನ್ನ ಬಾಳಿಗೆ
ಮುತ್ತೆಲ್ಲ ಕಡಲಲ್ಲಿ ಬಂಗಾರ ನೆಲದಲ್ಲಿ ಇರುವಂತೆ
ನೀ ನನ್ನಲ್ಲಿ, ಕಣ್ಣಲ್ಲಿ, ಮನದಲ್ಲಿ

ತಾರೆಯು ಬಾನಿಗೆ ತಾವರೆ ನೀರಿಗೆ...

ಸೂರ್ಯ ಬಾನಲಿ ಬೆಳಕು ಭೂಮಿಯಲ್ಲಿ
ಹೂಗಳು ಲತೆಯಲಿ ನೀನೆಂದು ನನ್ನಲಿ
ಮೋಡ ಬಾನಲಿ ಮಳೆಯು ಭೂಮಿಯಲ್ಲಿ
ದುಂಬಿಯು ಹೂವಲಿ ನಾನೆಂದು ನಿನ್ನಲಿ, ನಾನೆಂದೂ ನಿನ್ನಲಿ
ತಾಳಿಯು ಕೊರಳಿಗೆ ಉಂಗುರ ಬೆರಳಿಗೆ
ಹೂದಂಡೆ ಈ ಹೆಣ್ಣ ಮುಡಿಗೆ
ನೀ ನನ್ನ ಬಾಳಿಗೆ
ಮುತ್ತೆಲ್ಲ ಕಡಲಲ್ಲಿ ಬಂಗಾರ ನೆಲದಲ್ಲಿ ಇರುವಂತೆ
ನೀ ನನ್ನಲ್ಲಿ, ಕಣ್ಣಲ್ಲಿ, ಮನದಲ್ಲಿ

ತಾರೆಯು ಬಾನಿಗೆ ತಾವರೆ ನೀರಿಗೆ...

ನಿನ್ನಾ ಕಾಣದಾ ದಿನವೂ ವರುಷದಂತೆ
ನಿನ್ನನು ಸೇರಲು ಯುಗವೊಂದು ನಿಮಿಷದಂತೆ
ನಿನ್ನಾ ನೋಡಲು ಬಯಕೆ ಹೃದಯದಲ್ಲಿ
ನಾಚುತ ಕರಗಿದೆ ನನ್ನಾಸೆ ನಿನ್ನಲಿ, ನನ್ನಾಸೆ ನಿನ್ನಲಿ
ತಾಳಿಯು ಕೊರಳಿಗೆ ಉಂಗುರ ಬೆರಳಿಗೆ
ಹೂದಂಡೆ ಈ ಹೆಣ್ಣ ಮುಡಿಗೆ
ನೀ ನನ್ನ ಬಾಳಿಗೆ
ಮುತ್ತೆಲ್ಲ ಕಡಲಲ್ಲಿ ಬಂಗಾರ ನೆಲದಲ್ಲಿ ಇರುವಂತೆ
ನೀ ನನ್ನಲ್ಲಿ, ಕಣ್ಣಲ್ಲಿ, ಮನದಲ್ಲಿ

ತಾರೆಯು ಬಾನಿಗೆ ತಾವರೆ ನೀರಿಗೆ...

Saturday, February 27, 2010

ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

ಚಿತ್ರ: ಮರೆಯದ ಹಾಡು
ಸಾಹಿತ್ಯ: ಆರ್.ಎನ್. ಜಯಗೋಪಾಲ್
ಸಂಗೀತ : ಜಿ. ಕೆ. ವೆಂಕಟೇಶ್
ಗಾಯನ : ಎಸ್.ಜಾನಕಿ


ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ
ಒಲವಾ ಭಾವವೀಣಾ
ನೀ ಮಿಡಿಯೆ ನಾ ನುಡಿಯೆ
ಅದುವೆ ಜೀವನ..

ಸ್ವರವೇಳು ಕಲೆತ ರಾಗ ಸ೦ಪೂರ್ಣ ಜೀವರಾಗ
ಉಸಿರೆರಡು ಬೆರೆತ ವೇಗ ಅನುರಾಗ ಭಾವಯೋಗ
ಜನುಮ ಜನುಮದಾ ಬ೦ಧಾ ಅನುಬ೦ಧಾ ನಮ್ಮದೂ
ತಪಸಿನಾ ಫಲವಿದೂ ದೈವದಾ ವರವಿದೂ
ಆ..ಆ..

ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

ಶೃತಿಲಯದ ಮಿಲನದಲ್ಲೇ ದೈವೀಕನಾದನಾದ ಲೀಲೆ
ಸತಿಪತಿಯ ಒಲವಿನಲ್ಲೇ ಸ೦ಸಾರ ನೌಕೆ ತೇಲೆ
ನೆನಪಿನ ತೋಟದ ಮಲ್ಲೇ ಹೂ ಮಾಲೆ
ಎ೦ದಿಗೂ ಬಾಡದಾ ಹೂವಿದು ಮುಗಿಯದಾ ಹಾಡಿದು
ಆ..ಆ..

ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

ಸವಿ ಮುರಳಿ ಕರೆದ ವೇಳೆ ಆ ರಾಧೆ ಓಡಿದ೦ತೆ
ಮಾಧವನ ನೆನಪಿನಲ್ಲೇ ಆ ಮೀರಾ ಹಾಡಿದ೦ತೆ
ನಿನ್ನೊಲವಿನಲ್ಲೆ ಮಿ೦ದೂ ನಾನಿ೦ದೂ
ಹಾಡುವೇ ನನ್ನನೇ ಮರೆಯುವೇ ನಿಮ್ಮಲೇ ಬೆರೆಯುವೆ
ಆ..ಆ..

ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

Friday, January 16, 2009

ನಗು ಎಂದಿದೆ ಮಂಜಿನ ಬಿಂದು

ಚಿತ್ರ: ಪಲ್ಲವಿ ಅನುಪಲ್ಲವಿ
ಸಾಹಿತ್ಯ: ಆರ್.ಎನ್. ಜಯಗೋಪಾಲ್
ಸಂಗೀತ: ಇಳಯ ರಾಜ
ಹಿನ್ನಲೆ ಗಾಯಕರು: ಎಸ್.ಜಾನಕಿ


ನಗು ಎಂದಿದೆ ಮಂಜಿನ ಬಿಂದು
ನಲಿ ಎಂದಿದೆ ಗಾಳಿ ಇಂದು

ಚಿಲಿಪಿಲಿ ಎಂದು ಹಕ್ಕಿಯು ಹೇಳಿದೆ ಈಗ ಬಾ... ಬಾ
ಜೊತೆಯಲಿ ಕೂಡಿ ನಮ್ಮಂತೆ ಹಾರು ನೀ ಬೇಗ.. ಬಾ... ಬಾ...
ಹಾರಲು ಆಗದೆ ಸೋತಿರಲು
ಬಾಳಿಗೆ ಗೆಳೆಯನು ಬೇಕಿರಲು
ಬಯಸಿದೆ ಅರಸಿದೆ ನಾ
ಕಂಡೇ... ಈಗಲೆ ನಾ
ನನ್ನ ಸ್ನೇಹಿತನಾ
ಇದೇ ನಗುವ ಮನದ ಸ್ಪಂದ
ಸವಿ ಮಧುರ... ಮಮತೆ ಬಂಧ...

ನಗು ಎಂದಿದೆ ಮಂಜಿನ ಬಿಂದು...

ಹಾಡುವ ಬಾ ಬಾ.. ನದಿ ಅಲೆ ಕೊಡುವುದು ರಾಗ... ಈಗ
ಕುಣಿಯುವ ಬಾ ಬಾ ಮಳೆಯ ಹನಿ ತರುವುದು ತಾಳ ಮೇಳ
ಪ್ರಕೃತಿಯು ಬರೆದ ಕವನವಿದು...
ಮಮತೆಯ ಸೊಗಸಿನಾ ಪಲ್ಲವಿಯು
ಸುಂದರ ಸ್ನೇಹವಿದು..
ಇಂಥ ಅನುಬಂಧ
ಎಂಥ ಆನಂದ
ಇದೇ ನಗುವ ಮನದ ಸ್ಪಂದ
ಸವಿ ಮಧುರ... ಮಮತೆ ಬಂಧ

ನಗು ಎಂದಿದೆ ಮಂಜಿನ ಬಿಂದು...

Tuesday, September 30, 2008

ಮೂಕ ಹಕ್ಕಿಯು ಹಾಡುತಿದೆ

ಚಿತ್ರ:ಧರ್ಮಸೆರೆ
ರಚನೆ: ವಿಜಯನಾರಸಿಂಹ
ಸಂಗೀತ: ಉಪೇಂದ್ರ ಕುಮಾರ್
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ ಮತ್ತು ಎಸ್.ಜಾನಕಿ


ಮೂಕ ಹಕ್ಕಿಯು ಹಾಡುತಿದೆ
ಹಾಡುತಿದೆ ಹಾಡುತಿದೆ ಹಾಡುತಿದೆ
ಭಾಷೆಗೂ ನಿಲುಕದ ಭಾವಗೀತೆಯ
ಸಾರಿ ಸಾರಿ ಹಾಡುತಿದೆ

ಸಖನೊಡಗೂಡೀ ಸುಖವನು ಕಾಣೋ
ಸುಂದರ ಸ್ವಪ್ನವ ಕಂಡು
ಹಿಗ್ಗಿ ಹಿಗ್ಗುತಾ ಹಾರುತಲಿರಲು
ಹಕ್ಕಿಯ ರೆಕ್ಕೆ ಮುರಿದಿತ್ತು..

ಮೂಕ ಹಕ್ಕಿಯು ಹಾಡುತಿದೆ...

ತಂಪಿನ ನೆರಳೆ ಬೆಂಕಿಯ ಕಾರಿತು
ಹಕ್ಕಿಯು ವಿಲವಿಲ ಒದ್ದಾಡಿತು
ನಾನಾ ಬಗೆಯ ವಿಷ ಬಾಣಗಳು
ಹಕ್ಕಿಯ ಒಡಲಿಗೆ ನಾಟಿತ್ತು
ವೇದನೆಯಲ್ಲಿ ತತ್ತರಿಸುತ್ತಾ
ತವರಿಗೆ ಹಕ್ಕಿ ಮರಳಿತ್ತು
ತನ್ನ ತವರಿಗೆ ಹಕ್ಕಿ ಮರಳಿತು
ಮರಳಿತು ಮರಳಿತು ಮರಳಿತು

ಒಂದೆಡೆ ತಾಯಾಗೋ ಹರುಷದ ಹಸಿರು
ಇನ್ನೊಂದೆಡೆ ಚೀತ್ಕಾರದ ಬಿಸಿ ಉಸಿರು ಉಸಿರು
ಒಂದೆಡೆ ತಾಯಾಗೋ ಹರುಷದ ಹಸಿರು
ಇನ್ನೊಂದೆಡೆ ಚೀತ್ಕಾರದ ಬಿಸಿ ಉಸಿರು ಉಸಿರು
ಸಂಕಟದಾ ಸುಳಿದಾಳಿಗೆ
ಹಕ್ಕಿ ಸುತ್ತಿ ಸುತ್ತಿತು
ಸುತ್ತಿ ಸುತ್ತಿ ಸುತ್ತಿತು

ಮೂಕ ಹಕ್ಕಿಯು ಹಾಡುತಿದೆ...

Saturday, July 19, 2008

ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ

ಚಿತ್ರ:ಗಾಳಿ ಮಾತು
ರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಜಾನಕಿ




ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಭುವಿಯಲ್ಲೋ ಬಾನಲ್ಲೋ ಇನ್ನೆಲ್ಲೋ ನಾ ಕಾಣೇ..

ಅರಳಿರುವ ಹೂವಿನಲ್ಲೀ ನಿನ್ನ ನೋಟವಾ
ಹರಿಯುತಿಹ ನೀರಿನಲ್ಲೀ ನಿನ್ನ ಓಟವಾ
ಇಂಪಾದ ಗಾನದಲ್ಲೀ ನಿನ್ನ ಮೊಗದ ಭಾವವಾ
ಮಳೆ ಬಿಲ್ಲ ಬಣ್ಣದಲ್ಲಿ ನಿನ್ನ ಅಂದವಾ
ನವಿಲಾಡೊ ನಾಟ್ಯದಲ್ಲೀ ಚಂದವಾ
ತಂಪಾದ ಗಾಳಿಯಲ್ಲೀ ನೀನಾಡೋ ಆಟವಾ
ದಿನವೆಲ್ಲಾ ನಾ ಕಂಡೇ ನಾ ಕಂಡೂ ಬೆರೆಗಾದೆ...

ಒಮ್ಮೆ ನಿನ್ನನ್ನೂ..

ಮಿನುಗುತಿಹ ತಾರೆಯೆಲ್ಲಾ ನಿನ್ನ ಕಂಗಳೋ
ನಗುತಿರಲು ಭೂಮಿಗೆಲ್ಲಾ ಬೆಳದಿಂಗಳೋ
ಆ ಬೆಳ್ಳೀ ಮೋಡವೆಲ್ಲಾ ನೀ ಬರೆದ ಬೊಂಬೆಗಳೋ
ಮೂಡಣದ ಅಂಚಿನಿಂದಾ ನಿನ್ನ ಪಯಣವೋ
ಮುಂಜಾನೆ ಕಾಣೋ ಕೆಂಪು ಚಂದುಟಿಯ ಬಣ್ಣವೋ
ಆಗಸದ ನೀಲಿಯೆಲ್ಲಾ ನೀ ನಡೆವ ಹಾದಿಯೋ
ನಿನ್ನಂತೇ ಯಾರಿಲ್ಲಾ ನಿನ್ನಲ್ಲೇ ಮನಸೆಲ್ಲಾ...

ಒಮ್ಮೆ ನಿನ್ನನ್ನೂ..

Tuesday, July 8, 2008

ಸವಿನೆನಪುಗಳು ಬೇಕು ಸವಿಯಲೀ ಬದುಕು

ಚಿತ್ರ: ಅಪರಿಚಿತ
ಸಂಗೀತ: ಎಲ್. ವೈದ್ಯನಾಥನ್
ಹಿನ್ನಲೆ ಗಾಯನ: ಎಸ್. ಜಾನಕಿ



ಸವಿನೆನಪುಗಳು ಬೇಕು ಸವಿಯಲೀ ಬದುಕು
ಕಹಿನೆನಪು ಸಾಕೊಂದು ಮಾಸಲೀ ಬದುಕು
ಬೆಂಬಿಡದ ಆ ನೆನಪು ಮರುಕಳಿಸಿ ದಿನವೆಲ್ಲ
ಕಾಡುತಿದೆ ಮನವ

ಸವಿನೆನಪುಗಳು ಬೇಕು ಸವಿಯಲೀ ಬದುಕು...

ಪ್ರಿಯತಮನ ಒಲವಿಂದ ಕನಸುಗಳು ಮೂಡಿ
ಇನಿಯನ ಎದೆಗೊರಗಿ ಆಸರೆಯ ಬೇಡಿ
ಸರಸ ಸವಿಯ ಬಯಸಿದೆನು ನಾನು
ವಿರಹ ವಿಫಲ ಫಲಿಸಿದವು ನನಗೆ
ಇನಿಯನ ಎದೆ ಬಡಿತ ಗುಂಡಿನ ದನಿಗಿರಿದು
ಮಾಸುತಿದೆ ಕನಸು

ಸವಿನೆನಪುಗಳು ಬೇಕು ಸವಿಯಲೀ ಬದುಕು...

ಬೀಸುತಿಹ ತಂಗಾಳಿ ಬಿಸಿಯಾಗಿ ಕಾಡಿ
ನೆನಪಿನ ಭೀತಿಯಲಿ ನಾ ಬಂದಿಯಾಗಿ
ಮನಸು ಹೃದಯ ನೊಂದು ನೋವಾಗಿದೆ
ಒಲವು ನಲಿವು ಮೂಡಿ ಮಸುಕಾಗಿ
ಅರಳುವ ಹೂವೊಂದು ಕಮರುವ ಭಯದಲೀ
ಸಾಗುತಿದೆ ಬದುಕು

ಸವಿನೆನಪುಗಳು ಬೇಕು ಸವಿಯಲೀ ಬದುಕು...

Tuesday, June 12, 2007

ತೆರೆದಿದೆ ಮನೆ ಓ ಬಾ ಅತಿಥಿ

ಚಿತ್ರ: ಹೊಸಬೆಳಕು
ಸಾಹಿತ್ಯ: ಕುವೆಂಪು
ಸಂಗೀತ: ಎಂ. ರಂಗರಾವ್
ಹಿನ್ನಲೆ ಗಾಯನ: ಎಸ್. ಜಾನಕಿ , ವಾಣಿ ಜಯರಾಮ್


ತೆರೆದಿದೆ ಮನೆ ಓ ಬಾ ಅತಿಥಿ
ಹೊಸಬೆಳಕಿನ ಹೊಸಗಾಳಿಯಾ
ಹೊಸಬಾಳನು ತಾ ಅತಿಥಿ

ಆವರೂಪದೊಳು ಬಂದರು ಸರಿಯೇ
ಆವವೇಷದೊಳು ನಿಂದರು ಸರಿಯೇ
ನೇಸರುದಯದೊಳು ಬಹೆಯಾ ಬಾ
ತಿಂಗಳಂದದಲಿ ಬಹೆಯಾ ಬಾ

ತೆರೆದಿದೆ ಮನೆ ಓ ಬಾ ಅತಿಥಿ...

ಇಂತಾದರು ಬಾ ಅಂತಾದರು ಬಾ
ಎಂತಾದರು ಬಾ ಬಾ
ಬೇಸರವಿದಕೂ ಸರಿಸುವ ಹೊಸ ಬಾಳ
ಉಸಿರಾಗಿ ಬಾ ಬಾ ಬಾ

ತೆರೆದಿದೆ ಮನೆ ಓ ಬಾ ಅತಿಥಿ...

ಕಡಲಾಗಿ ಬಾ ಬಾನಾಗಿ ಬಾ
ಗಿರಿಯಾಗಿ ಬಾ ಕಾನಾಗಿ ಬಾ
ಕಡಲಾಗಿ ಬಾನಾಗಿಗಿರಿಯಾಗಿ ಕಾನಾಗಿ
ತೆರೆದಿದೆ ಮನ ಓ ಬಾ
ಹೊಸ ತಾನದ ಹೊಸ ಗಾನದ
ಹೊಸ ತಾನದ ಹೊಸ ಗಾನದ
ರಸ ಜೀವವ ತಾ ತಾ ತಾ

ತೆರೆದಿದೆ ಮನೆ ಓ ಬಾ ಅತಿಥಿ...

Friday, June 8, 2007

ಕಂಗಳು ತುಂಬಿರಲು ಕಂಬನಿ ಧಾರೆಯಲಿ

ಚಿತ್ರ: ಚಂದನದ ಗೊಂಬೆ
ಸಾಹಿತ್ಯ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಜಾನಕಿ



ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ
ಮೇಣದ ದೀಪದಂತೆ ನೊಂದು ನೊಂದು ನೀರಾದೇ..

ನಿಮ್ಮ ರೂಪ ಕಣ್ಣಿನಲಿ
ನಿಮ್ಮ ಮಾತೆ ಕಿವಿಗಳಲೀ
ನಿಮ್ಮ ನೋಟ ಇನ್ನೂ ನನ್ನ
ಹೃದಯವೀಣೆ ಮೀಟಿರಲೂ
ನಿಮ್ಮ ಸ್ನೇಹ ಮನಸಿನಲಿ
ನಿಮ್ಮ ಪ್ರೇಮ ನೆನಪಿನಲಿ
ನಿಮ್ಮ ಮುದ್ದು ಕಂದಾ ನನ್ನಾ
ಅಮ್ಮಾ ಎಂದು ಕೂಗಿರಲೂ
ನೊಂದ ನನ್ನ ಜೀವ ಇಂದು
ಎನೋ ಸುಖಾ ಕಾಣುತಿದೇ

ಕಂಗಳು ತುಂಬಿರಲು ಕಂಬನಿ ಧಾರೆಯಲಿ...

ನೀವು ತಂದ ಈ ಮನೆಗೆ
ನೀವು ತಂದ ಈ ಸಿರಿಗೆ
ದೂರವಾಗಿ ಎಂದೆಂದಿಗೂ
ಹೋಗಲಾರೆ ನಿಮ್ಮಾಣೆಗೂ
ನಿಮ್ಮ ಮನೆ ಬಾಗಿಲಿಗೆ
ತೋರಣದ ಹಾಗಿರುವೇ
ನಿಮ್ಮ ಮನೆ ದೀಪವಾಗೀ
ಬೆಳಗುವೆ ನನ್ನಾಣೆಗೂ
ನಿಮ್ಮ ನೆನಪಲ್ಲೇ ನನ್ನಾ
ಬಾಳಾ ನಾನೂ ಸಾಗಿಸುವೇ

ಕಂಗಳು ತುಂಬಿರಲು ಕಂಬನಿ ಧಾರೆಯಲಿ...

Wednesday, June 6, 2007

ನಗುವ ನಯನ ಮದುರ ಮೌನ

ಚಿತ್ರ: ಪಲ್ಲವಿ ಅನುಪಲ್ಲವಿ
ಸಾಹಿತ್ಯ: ಆರ್.ಎನ್. ಜಯಗೋಪಾಲ್
ಸಂಗೀತ: ಇಳಯ ರಾಜ
ಹಿನ್ನಲೆ ಗಾಯಕರು: ಎಸ್.ಪಿ.ಬಾಲಸುಬ್ರಮಣ್ಯಮ್, ಎಸ್.ಜಾನಕಿ

ನಗುವ ನಯನ ಮದುರ ಮೌನ
ಮಿಡಿವ ಹೃದಯ ಇರೆ ಮಾತೇಕೆ
ಹೊಸ ಭಾಷೆಯಿದೂ ರಸ ಕಾವ್ಯವಿದೂ
ಇದ ಹಾಡಲು ಕವಿ ಬೇಕೇ

ನಿಂಗಾಗಿ ಹೇಳುವೆ ಕಥೆ ನೂರನೂ
ನಾನಿಂದು ನಗಿಸುವೆ ಈ ನಿನ್ನನೂ
ಇರುಳಲ್ಲಿ ಕಾಣುವೆ ಕಿರುನಗೆಯನೂ
ಕಣ್ಣಲ್ಲಿ ಹುಚ್ಚೊತ್ತ ಹೋಂಗನಸನೂ
ಜೊತೆಯಲ್ಲಿ ನಡೆವೆ ನಾ ಮಳೆಯಲೀ
ಬಿಡದಂತೆ ಹಿಡಿವೇ ಈ ಕೈಯನೂ
ಗೆಳೆಯಾ ಜೊತೆಗೇ ಹಾರೀ ಬರುವೇ
ಬಾನಾ ಎಲ್ಲೇ ದಾಟೀ ಬರುವೇ

ನಗುವ ನಯನ ಮದುರ ಮೌನ...

ಈ ರಾತ್ರಿ ಹಾಡೋ ಪಿಸು ಮಾತಲೀ
ನಾ ಕಂಡೆ ಇನಿದಾದ ಸವಿರಾಗವ
ನೀನಲ್ಲಿ ನಾನಿಲ್ಲಿ ಏಕಾಂತದೀ
ನಾಕಂಡೆ ನನ್ನದೇ ಹೊಸಲೋಕವ
ಈ ಸ್ನೇಹ ತಂದಿದೆ ಎದೆಯಲ್ಲೀ
ಎಂದೆಂದು ಅಳಿಸದ ರಂಗೋಲೀ
ಆಸೇ ಹೂವಾ ಹಾಸೀ ಕಾದೇ
ನಡೆ ನೀ ಕನಸಾ ಹೊಸಕೀ ಬಿಡದೇ

ನಗುವ ನಯನ ಮದುರ ಮೌನ...