ರಚನೆ: ಕುವೆಂಪು
ಸಂಗೀತ: ಮೈಸೂರು ಅನಂತಸ್ವಾಮಿ
ಹಿನ್ನಲೆ ಗಾಯನ: ಪುಷ್ಪ ಜಗದೀಶ್
ಮುಚ್ಚುಮರೆ ಇಲ್ಲದೆಯೇ
ನಿನ್ನ ಮುಂದೆಲ್ಲವನು
ಬಿಚ್ಚಿಡುವೆ ಓ ಗುರುವೇ, ಅಂತರಾತ್ಮ
ಪಾಪವಿದೆ ಪುಣ್ಯವಿದೆ
ನರಕವಿದೆ ನಾಕವಿದೆ
ಸ್ವೀಕರಿಸು ಓ ಗುರುವೇ, ಅಂತರಾತ್ಮ
ಮುಚ್ಚುಮರೆ ಇಲ್ಲದೆಯೇ...
ರವಿಗೆ ಕಾಂತಿಯನೀವೆ ನಿನ್ನ ಕಣ್ಣೀಕ್ಷಿಸಲು
ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಂಗೆ
ನರಕ ತಾನುಳಿಯುವುದೇ ನರಕವಾಗಿ
ಮುಚ್ಚುಮರೆ ಇಲ್ಲದೆಯೇ...
ಸಾಂತರೀತಿಯೊಳೆಮ್ಮಿ ಕದಡಿರುವುದೆನ್ನಾತ್ಮ
ನಾಂತರೀತಿಯು ಅದೆಂತೋ, ಓ ಅನಂತಾ..
ನನ್ನ ರೀತಿಯ ಕುರುಡಿಂದೆನ್ನ ರಕ್ಷಿಸೈ
ನಿನ್ನ ನೀತಿಯ ಬೆಳಗಿನ ಅನಂತಕೊಯ್
ಮುಚ್ಚುಮರೆ ಇಲ್ಲದೆಯೇ...
Showing posts with label ಕುವೆಂಪು. Show all posts
Showing posts with label ಕುವೆಂಪು. Show all posts
Wednesday, July 9, 2008
Thursday, June 21, 2007
ತನುವು ನಿನ್ನದು ಮನವು ನಿನ್ನದು
ರಚನೆ : ಕುವೆಂಪು
ಸಂಗೀತ ಮತ್ತು ಹಿನ್ನಲೆ ಗಾಯನ : ಮೈಸೂರು ಅನಂತಸ್ವಾಮಿ
ಆಲ್ಬಂ : ಭಾವಸಂಗಮ
ತನುವು ನಿನ್ನದು ಮನವು ನಿನ್ನದು
ಎನ್ನ ಜೀವನ ಧನವು ನಿನ್ನದು
ನಾನು ನಿನ್ನವನೆಂಬ ಹೆಮ್ಮೆಯ
ಋಣವು ಮಾತ್ರವೆ ನನ್ನದು
ನೀನು ಹೊಳೆದರೆ ನಾನು ಹೊಳೆವೆನು,
ನೀನು ಬೆಳೆದರೆ ನಾನು ಬೆಳೆವೆನು
ನನ್ನ ಹರಣದ ಹರಣ ನೀನು
ನನ್ನ ಮರಣದ ಮರಣವು
ನನ್ನ ಮರಣದ ಮರಣವು
ತನುವು ನಿನ್ನದು ಮನವು ನಿನ್ನದು...
ನನ್ನ ಮನದಲಿ ನೀನು ಯುಕ್ತಿ,
ನನ್ನ ಹೃದಯದಿ ನೀನೆ ಭಕ್ತಿ
ನೀನೆ ಮಾಯ ಮೋಹ ಶಕ್ತಿಯು,
ನನ್ನ ಜೀವನ ಮುಕ್ತಿಯು
ನನ್ನ ಜೀವನ ಮುಕ್ತಿಯು
ತನುವು ನಿನ್ನದು ಮನವು ನಿನ್ನದು...
ಸಂಗೀತ ಮತ್ತು ಹಿನ್ನಲೆ ಗಾಯನ : ಮೈಸೂರು ಅನಂತಸ್ವಾಮಿ
ಆಲ್ಬಂ : ಭಾವಸಂಗಮ
ತನುವು ನಿನ್ನದು ಮನವು ನಿನ್ನದು
ಎನ್ನ ಜೀವನ ಧನವು ನಿನ್ನದು
ನಾನು ನಿನ್ನವನೆಂಬ ಹೆಮ್ಮೆಯ
ಋಣವು ಮಾತ್ರವೆ ನನ್ನದು
ನೀನು ಹೊಳೆದರೆ ನಾನು ಹೊಳೆವೆನು,
ನೀನು ಬೆಳೆದರೆ ನಾನು ಬೆಳೆವೆನು
ನನ್ನ ಹರಣದ ಹರಣ ನೀನು
ನನ್ನ ಮರಣದ ಮರಣವು
ನನ್ನ ಮರಣದ ಮರಣವು
ತನುವು ನಿನ್ನದು ಮನವು ನಿನ್ನದು...
ನನ್ನ ಮನದಲಿ ನೀನು ಯುಕ್ತಿ,
ನನ್ನ ಹೃದಯದಿ ನೀನೆ ಭಕ್ತಿ
ನೀನೆ ಮಾಯ ಮೋಹ ಶಕ್ತಿಯು,
ನನ್ನ ಜೀವನ ಮುಕ್ತಿಯು
ನನ್ನ ಜೀವನ ಮುಕ್ತಿಯು
ತನುವು ನಿನ್ನದು ಮನವು ನಿನ್ನದು...
Labels:
ಕುವೆಂಪು,
ಭಾವ ಗೀತೆ,
ಭಾವಸಂಗಮ,
ಮೈಸೂರು ಅನಂತಸ್ವಾಮಿ
Tuesday, June 12, 2007
ತೆರೆದಿದೆ ಮನೆ ಓ ಬಾ ಅತಿಥಿ
ಚಿತ್ರ: ಹೊಸಬೆಳಕು
ಸಾಹಿತ್ಯ: ಕುವೆಂಪು
ಸಂಗೀತ: ಎಂ. ರಂಗರಾವ್
ಹಿನ್ನಲೆ ಗಾಯನ: ಎಸ್. ಜಾನಕಿ , ವಾಣಿ ಜಯರಾಮ್
ತೆರೆದಿದೆ ಮನೆ ಓ ಬಾ ಅತಿಥಿ
ಹೊಸಬೆಳಕಿನ ಹೊಸಗಾಳಿಯಾ
ಹೊಸಬಾಳನು ತಾ ಅತಿಥಿ
ಆವರೂಪದೊಳು ಬಂದರು ಸರಿಯೇ
ಆವವೇಷದೊಳು ನಿಂದರು ಸರಿಯೇ
ನೇಸರುದಯದೊಳು ಬಹೆಯಾ ಬಾ
ತಿಂಗಳಂದದಲಿ ಬಹೆಯಾ ಬಾ
ತೆರೆದಿದೆ ಮನೆ ಓ ಬಾ ಅತಿಥಿ...
ಇಂತಾದರು ಬಾ ಅಂತಾದರು ಬಾ
ಎಂತಾದರು ಬಾ ಬಾ
ಬೇಸರವಿದಕೂ ಸರಿಸುವ ಹೊಸ ಬಾಳ
ಉಸಿರಾಗಿ ಬಾ ಬಾ ಬಾ
ತೆರೆದಿದೆ ಮನೆ ಓ ಬಾ ಅತಿಥಿ...
ಕಡಲಾಗಿ ಬಾ ಬಾನಾಗಿ ಬಾ
ಗಿರಿಯಾಗಿ ಬಾ ಕಾನಾಗಿ ಬಾ
ಕಡಲಾಗಿ ಬಾನಾಗಿಗಿರಿಯಾಗಿ ಕಾನಾಗಿ
ತೆರೆದಿದೆ ಮನ ಓ ಬಾ
ಹೊಸ ತಾನದ ಹೊಸ ಗಾನದ
ಹೊಸ ತಾನದ ಹೊಸ ಗಾನದ
ರಸ ಜೀವವ ತಾ ತಾ ತಾ
ತೆರೆದಿದೆ ಮನೆ ಓ ಬಾ ಅತಿಥಿ...
ಸಾಹಿತ್ಯ: ಕುವೆಂಪು
ಸಂಗೀತ: ಎಂ. ರಂಗರಾವ್
ಹಿನ್ನಲೆ ಗಾಯನ: ಎಸ್. ಜಾನಕಿ , ವಾಣಿ ಜಯರಾಮ್
ತೆರೆದಿದೆ ಮನೆ ಓ ಬಾ ಅತಿಥಿ
ಹೊಸಬೆಳಕಿನ ಹೊಸಗಾಳಿಯಾ
ಹೊಸಬಾಳನು ತಾ ಅತಿಥಿ
ಆವರೂಪದೊಳು ಬಂದರು ಸರಿಯೇ
ಆವವೇಷದೊಳು ನಿಂದರು ಸರಿಯೇ
ನೇಸರುದಯದೊಳು ಬಹೆಯಾ ಬಾ
ತಿಂಗಳಂದದಲಿ ಬಹೆಯಾ ಬಾ
ತೆರೆದಿದೆ ಮನೆ ಓ ಬಾ ಅತಿಥಿ...
ಇಂತಾದರು ಬಾ ಅಂತಾದರು ಬಾ
ಎಂತಾದರು ಬಾ ಬಾ
ಬೇಸರವಿದಕೂ ಸರಿಸುವ ಹೊಸ ಬಾಳ
ಉಸಿರಾಗಿ ಬಾ ಬಾ ಬಾ
ತೆರೆದಿದೆ ಮನೆ ಓ ಬಾ ಅತಿಥಿ...
ಕಡಲಾಗಿ ಬಾ ಬಾನಾಗಿ ಬಾ
ಗಿರಿಯಾಗಿ ಬಾ ಕಾನಾಗಿ ಬಾ
ಕಡಲಾಗಿ ಬಾನಾಗಿಗಿರಿಯಾಗಿ ಕಾನಾಗಿ
ತೆರೆದಿದೆ ಮನ ಓ ಬಾ
ಹೊಸ ತಾನದ ಹೊಸ ಗಾನದ
ಹೊಸ ತಾನದ ಹೊಸ ಗಾನದ
ರಸ ಜೀವವ ತಾ ತಾ ತಾ
ತೆರೆದಿದೆ ಮನೆ ಓ ಬಾ ಅತಿಥಿ...
Labels:
ಎಸ್.ಜಾನಕಿ,
ಕುವೆಂಪು,
ಚಿತ್ರ ಗೀತೆ,
ವಾಣಿ ಜಯರಾಮ್,
ಹೊಸಬೆಳಕು
Subscribe to:
Posts (Atom)
