ಚಿತ್ರ: ಇಂತಿ ನಿನ್ನ ಪ್ರೀತಿಯ
ಗೀತರಚನೆ: ಜಯಂತ್ ಕಾಯ್ಕಿಣಿ
ಸಂಗೀತ: ಸಾಧು ಕೋಕಿಲ
ಹಿನ್ನಲೆ ಗಾಯನ:ವಾಣಿ ಮತ್ತು ಚಿನ್ಮಯೀ
ಮಧುವನ ಕರೆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೇ
ಬಿರುಗಾಳಿಯಲ್ಲಿ ತೇಲಿ
ಹೊಸ ಘಳಿಗೆ ಬಂದಿದೆ
ಕನಸೊಂದು ಮೈಯ್ಯಾ ಮುರಿದು
ಬಾ ಬಳಿಗೆ ಎಂದಿದೇ
ಶರಣಾಗು ಆದರೆ
ಸೆರೆಯಾಗು ಆದರೆ
ಮಧುವನ ಕರೆದರೆ...
ಕಂಗಳಲಿ ಕನಸಿನ ಕುಲುಮೆ
ಹೊಳೆಯುತಿದೆ ಜೀವದ ಒಲುಮೆ
ಬೆಳಕಲ್ಲಿ ನೋಡು ಆದರೆ
ಮೈಯೆಲ್ಲಾ ಚಂದ್ರನ ಗುರುತು
ಹೆಸರೆಲ್ಲೊ ಹೋಗಿದೆ ಮರೆತು
ನಾನ್ಯಾರು ಹೇಳು ಆದರೇ
ಮಧುವನ ಕರೆದರೆ...
ಮನಸಿನ ಹಸಿ ಬಣ್ಣಗಳಲ್ಲಿ
ನೀನೆಳೆವಾ ರೇಖೆಗಳಲ್ಲಿ
ನಾ ಮೂಡಬೇಕು ಆದರೇ
ಎದುರಿದ್ದು ಕರೆಯುವೇ ಏಕೆ
ಜೊತೆಯಿದ್ದು ಮರೆಯುವೇ ಏಕೆ
ನಿನ್ನೊಲವು ನಿಜವೇ ಆದರೇ
ಮಧುವನ ಕರೆದರೆ...
Showing posts with label ಚಿನ್ಮಯೀ. Show all posts
Showing posts with label ಚಿನ್ಮಯೀ. Show all posts
Sunday, March 7, 2010
Subscribe to:
Posts (Atom)
