ಚಿತ್ರ: ಮರೆಯದ ಹಾಡು
ಸಾಹಿತ್ಯ: ಆರ್.ಎನ್. ಜಯಗೋಪಾಲ್
ಸಂಗೀತ : ಜಿ. ಕೆ. ವೆಂಕಟೇಶ್
ಗಾಯನ : ಎಸ್.ಜಾನಕಿ
ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ
ಒಲವಾ ಭಾವವೀಣಾ
ನೀ ಮಿಡಿಯೆ ನಾ ನುಡಿಯೆ
ಅದುವೆ ಜೀವನ..
ಸ್ವರವೇಳು ಕಲೆತ ರಾಗ ಸ೦ಪೂರ್ಣ ಜೀವರಾಗ
ಉಸಿರೆರಡು ಬೆರೆತ ವೇಗ ಅನುರಾಗ ಭಾವಯೋಗ
ಜನುಮ ಜನುಮದಾ ಬ೦ಧಾ ಅನುಬ೦ಧಾ ನಮ್ಮದೂ
ತಪಸಿನಾ ಫಲವಿದೂ ದೈವದಾ ವರವಿದೂ
ಆ..ಆ..
ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ
ಶೃತಿಲಯದ ಮಿಲನದಲ್ಲೇ ದೈವೀಕನಾದನಾದ ಲೀಲೆ
ಸತಿಪತಿಯ ಒಲವಿನಲ್ಲೇ ಸ೦ಸಾರ ನೌಕೆ ತೇಲೆ
ನೆನಪಿನ ತೋಟದ ಮಲ್ಲೇ ಹೂ ಮಾಲೆ
ಎ೦ದಿಗೂ ಬಾಡದಾ ಹೂವಿದು ಮುಗಿಯದಾ ಹಾಡಿದು
ಆ..ಆ..
ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ
ಸವಿ ಮುರಳಿ ಕರೆದ ವೇಳೆ ಆ ರಾಧೆ ಓಡಿದ೦ತೆ
ಮಾಧವನ ನೆನಪಿನಲ್ಲೇ ಆ ಮೀರಾ ಹಾಡಿದ೦ತೆ
ನಿನ್ನೊಲವಿನಲ್ಲೆ ಮಿ೦ದೂ ನಾನಿ೦ದೂ
ಹಾಡುವೇ ನನ್ನನೇ ಮರೆಯುವೇ ನಿಮ್ಮಲೇ ಬೆರೆಯುವೆ
ಆ..ಆ..
ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ
Showing posts with label ಜಿ. ಕೆ. ವೆಂಕಟೇಶ್. Show all posts
Showing posts with label ಜಿ. ಕೆ. ವೆಂಕಟೇಶ್. Show all posts
Saturday, February 27, 2010
Sunday, July 15, 2007
ನಿನಗಾಗಿ ಓಡೋಡಿ ಬಂದೆ
ಚಿತ್ರ: ಸನಾದಿ ಅಪ್ಪಣ್ಣ
ರಚನೆ: ಚಿ.ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್
>
ನಿನಗಾಗಿ ಓಡೋಡಿ ಬಂದೆ ನಾನು
ಕಾಣದೆ ಹೀಗೇಕೆ ಮರೆಯಾಗಿ ಹೋದೆ
ಮರೆಯಾಗಿ ಹೋದೆ ನೀನು
ನಿನಗಾಗಿ ಓಡೋಡಿ ಬಂದೆ
ತಣ್ಣನೆ ಗಾಳಿ ಬೀಸಿದ ಹಾಗೆ
ಬಾಳಲಿ ಬಂದೆ ಸಂತಸ ತಂದೆ
ಕಣ್ಣಿಗೆ ಮಿಂಚು ಕಾಣುವ ಹಾಗೆ
ಬಾಳಿನ ಬಾನಲಿ ಬೆಳಕನು ತಂದೆ
ಸ್ನೇಹದಿ ಸೇರಿ ಮೋಹವ ತೋರಿ
ಸನಿಹಕೆ ಸಾರಿ ಮನವನು ಸೇರಿ
ಏಕೆ ನೀ ಮರೆಯಾದೆ
ನಿನಗಾಗಿ ಓಡೋಡಿ ಬಂದೆ...
ಬಿಸಿಲಿಗೆ ಹೂವು ಬಾಡುವ ಹಾಗೆ
ಕಾಣದಿ ನೊಂದೆ ವಿರಹದಿ ಬೆಂದೆ
ಮುಳ್ಳಿನ ಬಲೆಯ ಇಳಿಯಂತಾಗಿ
ಅಳುಕಿದೆ ಮನವು ನಡುಗಿದೆ ತನುವು
ತೀರದ ನೋವ ತಾಳದು ಜೀವ
ಕಾಣದೆ ನೀನು ಉಳಿಯನು ನಾನು
ಏಕೆ ನೀ ದೂರಾದೆ... ದೂರಾದೆ....
ನಿನಗಾಗಿ ಓಡೋಡಿ ಬಂದೆ...
ರಚನೆ: ಚಿ.ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್
>
ನಿನಗಾಗಿ ಓಡೋಡಿ ಬಂದೆ ನಾನು
ಕಾಣದೆ ಹೀಗೇಕೆ ಮರೆಯಾಗಿ ಹೋದೆ
ಮರೆಯಾಗಿ ಹೋದೆ ನೀನು
ನಿನಗಾಗಿ ಓಡೋಡಿ ಬಂದೆ
ತಣ್ಣನೆ ಗಾಳಿ ಬೀಸಿದ ಹಾಗೆ
ಬಾಳಲಿ ಬಂದೆ ಸಂತಸ ತಂದೆ
ಕಣ್ಣಿಗೆ ಮಿಂಚು ಕಾಣುವ ಹಾಗೆ
ಬಾಳಿನ ಬಾನಲಿ ಬೆಳಕನು ತಂದೆ
ಸ್ನೇಹದಿ ಸೇರಿ ಮೋಹವ ತೋರಿ
ಸನಿಹಕೆ ಸಾರಿ ಮನವನು ಸೇರಿ
ಏಕೆ ನೀ ಮರೆಯಾದೆ
ನಿನಗಾಗಿ ಓಡೋಡಿ ಬಂದೆ...
ಬಿಸಿಲಿಗೆ ಹೂವು ಬಾಡುವ ಹಾಗೆ
ಕಾಣದಿ ನೊಂದೆ ವಿರಹದಿ ಬೆಂದೆ
ಮುಳ್ಳಿನ ಬಲೆಯ ಇಳಿಯಂತಾಗಿ
ಅಳುಕಿದೆ ಮನವು ನಡುಗಿದೆ ತನುವು
ತೀರದ ನೋವ ತಾಳದು ಜೀವ
ಕಾಣದೆ ನೀನು ಉಳಿಯನು ನಾನು
ಏಕೆ ನೀ ದೂರಾದೆ... ದೂರಾದೆ....
ನಿನಗಾಗಿ ಓಡೋಡಿ ಬಂದೆ...
Subscribe to:
Posts (Atom)
