Showing posts with label ಡಾ. ರಾಜ್ ಕುಮಾರ್. Show all posts
Showing posts with label ಡಾ. ರಾಜ್ ಕುಮಾರ್. Show all posts

Thursday, August 12, 2010

ಜೀವ ಹೂವಾಗಿದೆ ಭಾವ ಜೇನಾಗಿದೆ

ಚಿತ್ರ: ನೀ ನನ್ನ ಗೆಲ್ಲಲಾರೆ
ಸಾಹಿತ್ಯ: ಚಿ.ಉದಯಶಂಕರ್
ಸಂಗೀತ: ಇಳಯ ರಾಜ
ಹಿನ್ನಲೆ ಗಾಯನ: ಡಾ.ರಾಜಕುಮಾರ್ ಮತ್ತು ಎಸ್.ಜಾನಕಿ




ಐ ಲವ್ ಯೂ, ಐ ಲವ್ ಯೂ
ಐ ಲವ್ ಯೂ, ಐ ಲವ್ ಯೂ
ಜೀವ ಹೂವಾಗಿದೆ ಭಾವ ಜೇನಾಗಿದೆ
ಬಾಳು ಹಾಡಾಗಿದೆ ನಿನ್ನ ಸೇರಿ ನಾನು
ಸಂಜೆ ತಂಗಾಳಿ ತಂಪಾಗಿ ಬೀಸಿ
ಹೂವ ಕಂಪನ್ನು ಹಾದಿಗೇ ಹಾಸಿ
ತಂದಿದೆ ಹಿತವ ನಮಗಾಗಿ
ತಂದಿದೆ ಹಿತವ ನಮಗಾಗಿ
ಜೋಡಿ ಬಾನಾಡಿ, ಮೇಲೆ ಹಾರಾಡಿ
ತೇಲಾಡಿ ಓಲಾಡಿ ನಲಿವಂತೆ,
ನಾವು ಆಡೋಣ ಇನ್ನೇಕೆ ಬಾ ಚಿಂತೆ
ಜೀವ ಹೂವಾಗಿದೆ ಭಾವ ಜೇನಾಗಿದೆ...
ಇನ್ನು ನಿನ್ನಾಸೆ ನನ್ನಾಸೆ ಒಂದೇ
ಎಂದು ನಾವಾಡೋ ಮಾತೆಲ್ಲ ಒಂದೇ
ಬಯಕೆಯು ಒಂದೇ ಗುರಿಯೊಂದೆ
ಬಯಕೆಯು ಒಂದೇ ಗುರಿಯೊಂದೆ
ನಿನ್ನ ಚೆಲುವಿಂದ ನಿನ್ನ ಒಲವಿಂದೆ
ನನ್ನಲ್ಲಿ ನೀ ತಂದೆ ಆನಂದ
ಈ ಸಂತೋಷ ಸೌಭಾಗ್ಯ ನಿನ್ನಿಂದ
ಜೀವ ಹೂವಾಗಿದೆ ಭಾವ ಜೇನಾಗಿದೆ...

Tuesday, May 4, 2010

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ

ಚಿತ್ರ: ಕೆರಳಿದ ಸಿಂಹ
ಸಂಗೀತ: ಸತ್ಯಂ
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್, ಡಾ.ಪಿ.ಬಿ.ಶ್ರೀನಿವಾಸ್

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಬಾಳಲೆ ಬೇಕು ಈ ಮನೆ ಬೆಳಕಾಗಿ
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಬಾಳಲೆ ಬೇಕು ಈ ಮನೆ ಬೆಳಕಾಗಿ
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ

ಬಾಡದ ತಾವರೆ ಹೂವಿನ ಹಾಗೆ ಎಂದಿಗು ಆರದ ಜ್ಯೋತಿಯ ಹಾಗೆ
ಗೋಪುರವೇರಿದ ಕಲಶದ ಹಾಗೆ ಆ ಧೃವ ತಾರೆಯೆ ನಾಚುವ ಹಾಗೆ
ಜೊತೆಯಲಿ ಎಂದೆಂದು ನೀನಿರಬೇಕು ಬೇರೆ ಏನು ಬೇಡೆವು ನಾವು

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ...

ಸಂಜೆಯ ಗಾಳಿಯ ತಂಪಿನ ಹಾಗೆ ಮಲ್ಲಿಗೆ ಹೂವಿನ ಕಂಪಿನ ಹಾಗೆ
ಜೀವವ ತುಂಬುವ ಉಸಿರಿನ ಹಾಗೆ ನಮ್ಮನು ಸೇರಿ ಎಂದಿಗು ಹೀಗೆ
ನಗುತಲಿ ಒಂದಾಗಿ ನೀನಿರಬೇಕು ನಿನ್ನ ನೆರಳಲಿ ನಾವಿರಬೇಕು

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ...

ಸಾವಿರ ನದಿಗಳು ಸೇರಿದರೇನು ಸಾಗರಕೆ ಸಮನಾಗುವುದೇನು
ಶತಕೋಟಿ ದೇವರು ಹರಸಿದರೇನು ಅಮ್ಮನ ಹರಕೆಗೆ ಸರಿಸಾಟಿಯೇನು
ತಾಯಿಗೆ ಆನಂದ ತಂದರೆ ಸಾಕು ಬೇರು ಪೂಜೆ ಏತಕೆ ಬೇಕು

ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ...

Thursday, November 19, 2009

ಇದು ರಾಮ ಮಂದಿರ

ಚಿತ್ರ: ರವಿಚಂದ್ರ
ಗೀತರಚನೆ: ಚಿ.ಉದಯಶಂಕರ್
ಸಂಗೀತ: ಉಪೇಂದ್ರ ಕುಮಾರ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್



ಇದು ರಾಮ ಮಂದಿರ
ನೀ ರಾಮ ಚಂದಿರ
ಜೊತೆಯಾಗಿ ನೀ ಇರಲು ಬಾಳ ಸಹಜ ಸುಂದರ

ಇದು ರಾಮ ಮಂದಿರ...

ಸ್ವಾಮಿ ನಿನ್ನ ಕಣ್‌ಗಳಲಿ,
ಚಂದ್ರೋದಯ ಕಾಣುವೆ
ಸ್ವಾಮಿ ನಿನ್ನ ನಗುವಲಿ,
ಅರುಣೋದಯ ನೋಡುವೆ
ಸರಸದಲ್ಲಿ ಚತುರ ಚತುರ,
ನಿನ್ನ ಸ್ನೇಹ ಅಮರ
ನಿನ್ನ ಬಾಳ ಕಮಲದಲಿ,
ನಾನು ನಲಿವ ಭ್ರಮರ

ಇದು ರಾಮ ಮಂದಿರ...

ನನ್ನ ಸೀತೆ ಇರುವ ತಾಣ,
ಕ್ಷೀರ ಸಾಗರದಂತೆ
ನನ್ನ ಸೀತೆ ಬೆರೆತ ಮನವು,
ಹೊನ್ನ ಹೂವಿನಂತೆ
ನುಡಿವ ಮಾತು ಮಧುರ ಮಧುರ,
ನುಡಿವ ಮಾತು ಮಧುರ ಮಧುರ
ನಿನ್ನ ಪ್ರೇಮ ಅಮರ
ನೀನು ಹೃದಯ ತುಂಬಿರಲು,
ಬಾಳು ಪ್ರೇಮ ಮಂದಿರ

ಇದು ರಾಮ ಮಂದಿರ, ಆನಂದ ಸಾಗರ
ಜೊತೆಯಾಗಿ ನೀ ಇರಲು, ಬಾಳು ಸಹಜ ಸುಂದರ

Thursday, August 7, 2008

ಶ್ರಾವಣ ಮಾಸ ಬಂದಾಗ ಆನಂದ ತಂದಾಗ

ಚಿತ್ರ: ಶ್ರಾವಣ ಬಂತು
ರಚನೆ: ಚಿ.ಉದಯಶಂಕರ್
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್ ಮತ್ತು ವಾಣಿ ಜಯರಾಮ್


ಶ್ರಾವಣ ಮಾಸ ಬಂದಾಗ ಆನಂದ ತಂದಾಗ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ

ನೀ ನನ್ನ ಜೊತೆಯಾಗಿ ಇರುವಾಗ ಹಿತವಾಗಿ
ಬಿಸಿಲೆಲ್ಲ ತಂಪಾಗಿ ಬೆಳದಿಂಗಳಂತಾಗಿ
ಮಾತೆಲ್ಲ ಹಾಡಾಗಿ ಆ ಹಾಡು ಇಂಪಾಗಿ
ಯುಗವೊಂದು ದಿನವಾಗಿ ಕ್ಷಣವಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ

ಶ್ರಾವಣ ಮಾಸ ಬಂದಾಗ ಆನಂದ ತಂದಾಗ...

ಮುಗಿಲೆಲ್ಲ ಕಪ್ಪಾಗಿ ಮಿಂಚಿಂದ ಬೆಳಕಾಗಿ
ಗುಡುಗಿಂದ ಸದ್ದಾಗಿ ಮಳೆಬಂದು ತಂಪಾಗಿ
ಸಂತೋಷ ಹೆಚ್ಚಾಗಿ ನವಿಲೊಂದು ಹುಚ್ಚಾಗಿ
ಕುಣಿದಾಗ ಸೊಗಸಾಗಿ ನಮಗಾಗ ಚಳಿಯಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ

ಶ್ರಾವಣ ಮಾಸ ಬಂದಾಗ ಆನಂದ ತಂದಾಗ...

Sunday, July 15, 2007

ನಿನಗಾಗಿ ಓಡೋಡಿ ಬಂದೆ

ಚಿತ್ರ: ಸನಾದಿ ಅಪ್ಪಣ್ಣ
ರಚನೆ: ಚಿ.ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್
>

ನಿನಗಾಗಿ ಓಡೋಡಿ ಬಂದೆ ನಾನು
ಕಾಣದೆ ಹೀಗೇಕೆ ಮರೆಯಾಗಿ ಹೋದೆ
ಮರೆಯಾಗಿ ಹೋದೆ ನೀನು
ನಿನಗಾಗಿ ಓಡೋಡಿ ಬಂದೆ

ತಣ್ಣನೆ ಗಾಳಿ ಬೀಸಿದ ಹಾಗೆ
ಬಾಳಲಿ ಬಂದೆ ಸಂತಸ ತಂದೆ
ಕಣ್ಣಿಗೆ ಮಿಂಚು ಕಾಣುವ ಹಾಗೆ
ಬಾಳಿನ ಬಾನಲಿ ಬೆಳಕನು ತಂದೆ
ಸ್ನೇಹದಿ ಸೇರಿ ಮೋಹವ ತೋರಿ
ಸನಿಹಕೆ ಸಾರಿ ಮನವನು ಸೇರಿ
ಏಕೆ ನೀ ಮರೆಯಾದೆ

ನಿನಗಾಗಿ ಓಡೋಡಿ ಬಂದೆ...

ಬಿಸಿಲಿಗೆ ಹೂವು ಬಾಡುವ ಹಾಗೆ
ಕಾಣದಿ ನೊಂದೆ ವಿರಹದಿ ಬೆಂದೆ
ಮುಳ್ಳಿನ ಬಲೆಯ ಇಳಿಯಂತಾಗಿ
ಅಳುಕಿದೆ ಮನವು ನಡುಗಿದೆ ತನುವು
ತೀರದ ನೋವ ತಾಳದು ಜೀವ
ಕಾಣದೆ ನೀನು ಉಳಿಯನು ನಾನು
ಏಕೆ ನೀ ದೂರಾದೆ... ದೂರಾದೆ....

ನಿನಗಾಗಿ ಓಡೋಡಿ ಬಂದೆ...