Showing posts with label ತಿರುಗುಬಾಣ. Show all posts
Showing posts with label ತಿರುಗುಬಾಣ. Show all posts

Thursday, October 23, 2008

ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ

ಚಿತ್ರ:ತಿರುಗುಬಾಣ
ರಚನೆ: ಚಿ.ಉದಯಶಂಕರ್
ಸಂಗೀತ: ಸತ್ಯಂ
ಹಿನ್ನಲೆ ಗಾಯನ: ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಮ್


ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ


ಕರುನಾಡು ಸ್ವರ್ಗದ ಸೀಮೆ
ಕಾವೇರಿ ಹುಟ್ಟಿದ ನಾಡು
ಕಲ್ಲಲ್ಲಿ ಕಲೆಯನು ಕಂಡ
ಬೇಲೂರ ಶಿಲ್ಪದ ಬೀಡು
ಬಸವೇಶ್ವರ ರನ್ನ ಪಂಪರ
ಕವಿವಾಣಿಯ ನಾಡು

ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ...

ಚಾಮುಂಡಿ ರಕ್ಷೆಯು ನಮಗೆ
ಗೊಮ್ಮಟೇಶ ಕಾವಲು ಇಲ್ಲಿ
ಶೃoಗೇರಿ ಶಾರದೆ ಲೀಲೆ
ರಸತುಂಗೆಯಾಗಿದೆ ಇಲ್ಲಿ
ವಿಶ್ವಖ್ಹ್ಯಾತಿಯ ವಿಶ್ವೇಶ್ವರಯ್ಯ
ಜನಿಸಿದ ಈ ನಾಡು

ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ...

ಎಳೇಳು ಜನ್ಮವೇ ಬರಲಿ
ಈ ಮಣ್ಣಲಿ ನಾನು ಹುಟ್ಟುವೆ
ಏನೇನು ಕಷ್ಟವೇ ಇರಲಿ
ಸಿರಿಗನ್ನಡಕಾಗೆ ದುಡಿಯುವೆ
ತನು ಕನ್ನಡ ನುಡಿ ಕನ್ನಡ
ಮನ ಕನ್ನಡವಾಗಿರಲಿ

ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ...