Showing posts with label ಮನೋಮೂರ್ತಿ. Show all posts
Showing posts with label ಮನೋಮೂರ್ತಿ. Show all posts

Monday, September 28, 2009

ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ

ಚಿತ್ರಃ ಮನಸಾರೆ
ಗೀತರಚನೆಃ ಜಯಂತ್ ಕಾಯ್ಕಿಣಿ
ಸಂಗೀತಃ ಮನೋಮೂರ್ತಿ
ಹಿನ್ನಲೆ ಗಾಯನಃ ಸೋನು ನಿಗಮ್



ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ
ಇಲ್ಲೇ ಒಲವಾಗಿದೆ ಎಂದೂ ಕನಸೊಂದು ಬೀಳುತಿದೆ
ವ್ಯಾಮೋಹವ ಕೇವಲ ಮಾತಿನಲೀ ಹೇಳಲು ಬರಬಹುದೆ
ನಿನ ನೋಡಿದ ಮೇಲೆಯು ಪ್ರೀತಿಯಲಿ ಬೀಳದೆ ಇರಬಹುದೆ


ಕಣ್ಣಲಿ ಮೂಡಿದೆ ಹನಿಗವನ ಕಾಯಿಸಿ ನೀ ಕಾಡಿದರೆ
ನೂತನ ಬಾವದ ಆಗಮನ ನೀ ಬಿಡದೇ ನೋಡಿದರೆ
ನಿನ ಧ್ಯಾನದಿ ನಿನ್ನಯ ತೋಳಿನಲಿ ಹೀಗೆಯೆ ಇರಬಹುದೆ
ಈ ಧ್ಯಾನವ ಕಂಡರೆ ದೇವರಿಗೂ ಕೋಪವು ಬರಬಹುದೆ

ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...

ನೆನಪಿನ ಹೂಗಳ ಬಿಸಣಿಗೆ ನೀ ಬರುವ ದಾರಿಯಲಿ
ಓಡಿದೆ ದೂರಕೆ ಬೇಸರಿಕೆ ನೀ ಇರುವ ಊರಿನಲಿ
ಅನುಮಾನವೆ ಇಲ್ಲವೆ ಕನಸಿನಲಿ ಮೆಲ್ಲಗೆ ಬರಬಹುದೆ
ಅಲೆಮಾರಿಯ ಹೃದಯದ ಡೇರೆಯಲಿ ನೀನು ಇರಬಹುದೆ

ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...