Showing posts with label ವಾಣಿ ಜಯರಾಮ್. Show all posts
Showing posts with label ವಾಣಿ ಜಯರಾಮ್. Show all posts

Sunday, October 3, 2010

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ

ಚಿತ್ರ: ಅನುಭವ
ಸಾಹಿತ್ಯ: ವಿ.ಮನೋಹರ್
ಸಂಗೀತ: ಎಲ್. ವೈದ್ಯನಾಥನ್
ಗಾಯನ: ವಾಣಿ ಜಯರಾಮ್




ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ
ನೀ ಅರಿಯದೆ ಹೋದೆ ಪ್ರೇಮದ ನಾ ಸಂದೇಶವ ತಂದಾಗ
ನೀ ಶೃತಿಯ ಮಿಡಿದಾಗ ಹಾಡಿದೆ ನಾ ಹುಸಿ ರಾಗ
ತೋರಿದೆ ನೀ ಅನುರಾಗ ಗಮನಿಸದೆ ತೆರಳಿದೆ ನಾ

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ...

ನಲ್ಲ ಬಳಿಸಾರಿ ಮೆಲ್ಲ ಬಿಗಿದಾಗ ತಳ್ಳಿ ದೂರಾದೆ ಅರಿಯದೆ ನಾ
ಮದನ ನೀನಾಗಿ ಮುದದಿ ತೆರೆದಾಗ ರತಿಯ ಸವಿಲೀಲೆ ಮರೆತೆನು ನಾ
ಹೂವಿನ ಹಾಸಿಗೆ ನೀ ಹಾಸಿ ಮೋಗದಿ ನನ್ನನು ಕರೆದಾಗ
ಮಾಡಿದೆ ನಾನು ಪರಿಹಾಸ ನೀಡದೆ ನಿನಗೆ ಉಲ್ಲಾಸ
ಸವಿ ಇರುಳ ಹೊಂಗನಸ ಮುರಿದೆನು ನಾ

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ...

ಮೇಘ್ಹ ಸರಿದಾಗ ತಾರೆ ಹೊಳೆದಾಗ ಚಂದ್ರ ಮರೆಯಾದ ನನ್ನ ತೊರೆದ
ಯಾರ ಬಳಿನಾನು ನೋವ ನುಡಿದೇನು ಇನಿಯ ಮರೆತಾಗ ಸಹಿಸೆನು ನಾ
ಬಾಳೆನು ಚಿಂತೆಯ ಪಾಲಾಇ ದುಂಬಿಯ ಕಾಣದ ಹೂವಾಗಿ
ತಾಳೆನು ನಾನು ಏಕಾಂತ ಬರುವೆನೆಇನ್ನ ಓ ಕಾಂತ
ಕೊರಗುತಿಹೆ ಮರುಗುತಿಗೆ ವಿರಹದಿ ನಾ

ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ...

Wednesday, March 3, 2010

ಮಧುಮಾಸ ಚಂದ್ರಮಾ ನೈದಿಲೆಗೆ ಸಂಭ್ರಮಾ

ಚಿತ್ರ: ವಿಜಯವಾಣಿ
ಗೀತರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ:ಎಸ್.ಜಾನಕಿ ಮತ್ತು ವಾಣಿ ಜಯರಾಮ್


ಮಧುಮಾಸ ಚಂದ್ರಮಾ ನೈದಿಲೆಗೆ ಸಂಭ್ರಮಾ
ಒಲವಿನಾ ಲೋಕಕೇ ನೀ ತಂದೇ ಪೌರ್ಣಿಮಾ

ನಾ ಪ್ರೇಮದರಮನೆಯಲ್ಲೀ ವೈಭೋಗ ಸಿರಿಯನು ಕಂಡೇ
ನನ್ನೆದೆಯ ಸಿಂಹಾಸನದೀ ನೀ ರಾಜ್ಯವಾಳಿದೇ
ನೀ ನನ್ನ ಬಾಳಿನ ಪುಟದೇ ಅನುರಾಗ ಕವಿತೆಯ ಬರೆದೇ
ನಾನಾಗ ಭಾವದ ಹೊಳೆಯಾ ಅಲೆಯಲ್ಲಿ ತೇಲಿದೇ
ಅಲೆಯಲ್ಲಿ ತೇಲಿ ತೇಲಿದೇ

ಮಧುಮಾಸ ಚಂದ್ರಮಾ ನೈದಿಲೆಗೆ ಸಂಭ್ರಮಾ...

ರಸಪೂರ್ಣ ಮೈತ್ರಿಯ ಸಮಯಾ ನೂರಾಸೆ ಕಡಲಿದು ಹೃದಯಾ
ನೀ ನಡೆಸು ಅಂಬಿಗನಾಗಿ ಒಲವೆಂಬ ನೌಕೆಯಾ
ಬಂಗಾರ ತೇರನು ಏರೀ ನಾ ನಿನ್ನ ಸಂಗದಿ ಬೆರೆವೆ
ಸುಖವೆಂಬ ಉಯ್ಯಾಲೆಯಲೀ ಸಖ ನಿನ್ನಾ ತೂಗುವೇ
ಹಾಯಾಗಿ ತೂಗಿ ಕೂಗುವೇ

ಮಧುಮಾಸ ಚಂದ್ರಮಾ ನೈದಿಲೆಗೆ ಸಂಭ್ರಮಾ...

Thursday, August 7, 2008

ಶ್ರಾವಣ ಮಾಸ ಬಂದಾಗ ಆನಂದ ತಂದಾಗ

ಚಿತ್ರ: ಶ್ರಾವಣ ಬಂತು
ರಚನೆ: ಚಿ.ಉದಯಶಂಕರ್
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್ ಮತ್ತು ವಾಣಿ ಜಯರಾಮ್


ಶ್ರಾವಣ ಮಾಸ ಬಂದಾಗ ಆನಂದ ತಂದಾಗ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ

ನೀ ನನ್ನ ಜೊತೆಯಾಗಿ ಇರುವಾಗ ಹಿತವಾಗಿ
ಬಿಸಿಲೆಲ್ಲ ತಂಪಾಗಿ ಬೆಳದಿಂಗಳಂತಾಗಿ
ಮಾತೆಲ್ಲ ಹಾಡಾಗಿ ಆ ಹಾಡು ಇಂಪಾಗಿ
ಯುಗವೊಂದು ದಿನವಾಗಿ ಕ್ಷಣವಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ

ಶ್ರಾವಣ ಮಾಸ ಬಂದಾಗ ಆನಂದ ತಂದಾಗ...

ಮುಗಿಲೆಲ್ಲ ಕಪ್ಪಾಗಿ ಮಿಂಚಿಂದ ಬೆಳಕಾಗಿ
ಗುಡುಗಿಂದ ಸದ್ದಾಗಿ ಮಳೆಬಂದು ತಂಪಾಗಿ
ಸಂತೋಷ ಹೆಚ್ಚಾಗಿ ನವಿಲೊಂದು ಹುಚ್ಚಾಗಿ
ಕುಣಿದಾಗ ಸೊಗಸಾಗಿ ನಮಗಾಗ ಚಳಿಯಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ

ಶ್ರಾವಣ ಮಾಸ ಬಂದಾಗ ಆನಂದ ತಂದಾಗ...

Tuesday, June 12, 2007

ತೆರೆದಿದೆ ಮನೆ ಓ ಬಾ ಅತಿಥಿ

ಚಿತ್ರ: ಹೊಸಬೆಳಕು
ಸಾಹಿತ್ಯ: ಕುವೆಂಪು
ಸಂಗೀತ: ಎಂ. ರಂಗರಾವ್
ಹಿನ್ನಲೆ ಗಾಯನ: ಎಸ್. ಜಾನಕಿ , ವಾಣಿ ಜಯರಾಮ್


ತೆರೆದಿದೆ ಮನೆ ಓ ಬಾ ಅತಿಥಿ
ಹೊಸಬೆಳಕಿನ ಹೊಸಗಾಳಿಯಾ
ಹೊಸಬಾಳನು ತಾ ಅತಿಥಿ

ಆವರೂಪದೊಳು ಬಂದರು ಸರಿಯೇ
ಆವವೇಷದೊಳು ನಿಂದರು ಸರಿಯೇ
ನೇಸರುದಯದೊಳು ಬಹೆಯಾ ಬಾ
ತಿಂಗಳಂದದಲಿ ಬಹೆಯಾ ಬಾ

ತೆರೆದಿದೆ ಮನೆ ಓ ಬಾ ಅತಿಥಿ...

ಇಂತಾದರು ಬಾ ಅಂತಾದರು ಬಾ
ಎಂತಾದರು ಬಾ ಬಾ
ಬೇಸರವಿದಕೂ ಸರಿಸುವ ಹೊಸ ಬಾಳ
ಉಸಿರಾಗಿ ಬಾ ಬಾ ಬಾ

ತೆರೆದಿದೆ ಮನೆ ಓ ಬಾ ಅತಿಥಿ...

ಕಡಲಾಗಿ ಬಾ ಬಾನಾಗಿ ಬಾ
ಗಿರಿಯಾಗಿ ಬಾ ಕಾನಾಗಿ ಬಾ
ಕಡಲಾಗಿ ಬಾನಾಗಿಗಿರಿಯಾಗಿ ಕಾನಾಗಿ
ತೆರೆದಿದೆ ಮನ ಓ ಬಾ
ಹೊಸ ತಾನದ ಹೊಸ ಗಾನದ
ಹೊಸ ತಾನದ ಹೊಸ ಗಾನದ
ರಸ ಜೀವವ ತಾ ತಾ ತಾ

ತೆರೆದಿದೆ ಮನೆ ಓ ಬಾ ಅತಿಥಿ...