Showing posts with label ವಿಜಯಭಾಸ್ಕರ. Show all posts
Showing posts with label ವಿಜಯಭಾಸ್ಕರ. Show all posts

Sunday, May 9, 2010

ಓ ಗುಣವಂತ ಓ ಗುಣವಂತ

ಚಿತ್ರ: ಮಸಣದ ಹೂವು
ಸಾಹಿತ್ಯ: ವಿಜಯನಾರಸಿಂಹ
ಸಂಗೀತ : ವಿಜಯಭಾಸ್ಕರ
ಹಿನ್ನಲೆ ಗಾಯನ: ಎಸ್.ಜಾನಕಿ

ಓ ಗುಣವಂತ ಓ ಗುಣವಂತ
ನಿನ್ನಾ ಗುಣಗಾನ ಮಾಡಲು ಪದಗಳೇ ಸಿಗುತ್ತಿಲ್ಲಾ
ಪದಗಳೇ ಸಿಗುತ್ತಿಲ್ಲ

ದಾರಿದೀಪ ತೋರುತಾ, ತೋರುತಾ
ಕರುಣೆ ಕಿರಣ ಬೀರುತಾ, ಬೀರುತಾ
ಬಂದೆ ನೀನು ಓ ಸ್ನೇಹಿತ, ಸ್ನೇಹಿತ
ನನ್ನ ಬಾಳು ಬೆಳಗಿದೆ, ಬೆಳಗಿದೆ

ಓ ಗುಣವಂತ ಓ ಗುಣವಂತ...

ಹೃದಯ ನಿನಗೆ ಸೋತಿದೆ, ಸೋತಿದೆ
ನುಡಿಗೆ ನಾಲಿಗೆ ನಾಚಿದೆ, ನಾಚಿದೆ
ಬಗೆಬಗೆ ಭಾವ ಮೂಡಿದೆ, ಮೂಡಿದೆ
ಮನವು ನಿನ್ನೇ ಹೊಗಳಿದೆ, ಹೊಗಳಿದೆ

ಓ ಗುಣವಂತ ಓ ಗುಣವಂತ...

ಪ್ರೇಮದಾಸೆ ತೋರಲಾರೆ, ತೋರಲಾರೆ
ಪ್ರಣಯ ಲೀಲೆ ಆಡಲಾರೆ, ಆಡಲಾರೆ
ಭಾಷೆಯ ಮೀರಿದೆ ಓ ಭಾವನೆ, ಕಾಮನೆ
ಆಸೆಯ ಮೀರಿದೆ ಮೋಹದ ಪ್ರೇರಣೆ

ಓ ಗುಣವಂತ ಓ ಗುಣವಂತ

Thursday, April 29, 2010

ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ

ಚಿತ್ರ: ಜಿಮ್ಮಿಗಲ್ಲು
ಗೀತರಚನೆ:
ಚಿ.ಉದಯಶಂಕರ್
ಸಂಗೀತ: ವಿಜಯಭಾಸ್ಕರ
ಹಿನ್ನಲೆ ಗಾಯನ:ವಿಷ್ಣುವರ್ಧನ್


ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ
ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ
ಅಂಗೈಯಗಲ ಜಾಗ ಸಾಕು ಹಾಯಾಗಿರೋಕೆ

ಕಾಡ್ನಾಗೊಂದು ಮರವೇ ಒಣಗಿ ಬಿದ್ರೆ ಏನಾಯ್ತು
ಊರ್ನಾಗೊಂದು ಮನೆಯೇ ಉರಿದು ಹೋದ್ರೆ ಏನಾಯ್ತು
ಕಾಡ್ನಾಗೊಂದು ಮರವೇ ಒಣಗಿ ಬಿದ್ರೆ ಏನಾಯ್ತು
ಊರ್ನಾಗೊಂದು ಮನೆಯೇ ಉರಿದು ಹೋದ್ರೆ ಏನಾಯ್ತು
ಒಂದು ಅಲ್ಲೇ ನನ್ನ ಹೋಗು ಅಂದರೇನು
ಸ್ವರ್ಗದಂತಾ ಊರು ನನ್ನ ಹತ್ತಿರ ಕರೆದಾಯ್ತು

ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ...

ದುಡಿಯೋದಕ್ಕೆ ಮೈಯ್ಯಾ ತುಂಬಾ ಶಕ್ತಿ ತುಂಬೈತೆ
ಅಡ್ಡ ದಾರಿ ಹಿಡಿಯೋದ್ ತಪ್ಪು ಅಂಥ ಗೊತ್ತೈತೆ
ದುಡಿಯೋದಕ್ಕೆ ಮೈಯ್ಯಾ ತುಂಬಾ ಶಕ್ತಿ ತುಂಬೈತೆ
ಅಡ್ಡ ದಾರಿ ಹಿಡಿಯೋದ್ ತಪ್ಪು ಅಂಥ ಗೊತ್ತೈತೆ
ಕಷ್ಟಾ ಒಂದೇ ಬರದು ಸುಖವೂ ಬರದೇ ಇರದು
ರಾತ್ರೀ ಮುಗಿದಾ ಮೇಲೇ ಹಗಲು ಬಂದೇ ಬತ್ತೈತೆ

ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ...

ಹರಿಯೋ ನದಿಯು ಒಂದೇ ಕಡೆ ನಿಲ್ಲೊಕ್ಕಾಗಲ್ಲ
ಹುಟ್ಟಿದ ಮನುಷ ಒಂದೇ ಊರಲಿ ಬಾಳೋಕಾಗಲ್ಲ
ಹರಿಯೋ ನದಿಯು ಒಂದೇ ಕಡೆ ನಿಲ್ಲೊಕ್ಕಾಗಲ್ಲ
ಹುಟ್ಟಿದ ಮನುಷ ಒಂದೇ ಊರಲಿ ಬಾಳೋಕಾಗಲ್ಲ
ದೇವ್ರು ತಾನೇ ನಂಗೆ ಅಪ್ಪ ಅಮ್ಮ ಎಲ್ಲಾ
ಸಾಯೋ ತನಕಾ ನಂಬಿದವರ ಕೈ ಬಿಡಾಕಿಲ್ಲ

ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ...

Wednesday, September 9, 2009

ತೂಕಡಿಸಿ ತೂಕಡಿಸಿ ಬೀಳದಿರು ತಮ್ಮ

ಚಿತ್ರಃ ಪಡುವಾರ ಹಳ್ಳಿ ಪಾಂಡವರು
ಸಂಗೀತಃ ವಿಜಯಭಾಸ್ಕರ



ತೂಕಡಿಸಿ ತೂಕಡಿಸಿ ಬೀಳದಿರು ತಮ್ಮ
ನನ್ನ ತಮ್ಮ ಮ೦ಕುತಿಮ್ಮ
ತೂಕಡಿಸಿ ತೂಕಡಿಸಿ ಬಿದ್ದರು
ನನ್ನಜ್ಜ ನಿನ್ನಜ್ಜ ಮುತ್ತಜ್ಜ

ಅಕ್ಷರದ ಸಕ್ಕರೆಯ ಕಹಿಯೆ೦ದು ತಿಳಿದು
ಪುಸ್ತಕವ ಕಸಕಿ೦ತ ಕಡೆಗಣಿಸಿ ಎಸೆದು
ಹಸ್ತವನು ತಲೆಗಿಟ್ಟು ಹಣೆ ಬರಹವೆ೦ದು
ತೂಕಡಿಸಿ ತೂಕಡಿಸಿ ಬಿದ್ದರು
ನಿನ್ನಜ್ಜ ನನ್ನಜ್ಜ ಮುತ್ತಜ್ಜ

ತೂಕಡಿಸಿ ತೂಕಡಿಸಿ ಬೀಳದಿರು ತಮ್ಮ...

ಹಾಕಿಟ್ಟು ಹುಯಿಗ೦ಜಿ ತು೦ಡು ಕ೦ಬಳಿಗೆ
ತಾವಿಟ್ಟರೊ ಕೊರಳ ಜೀತದ ಕತ್ತರಿಗೆ
ದಿಕ್ಕೆಟ್ಟರೊ ನರಳಿ ಜೀವಶವದ೦ತೆ
ತೂಕಡಿಸಿ ತೂಕಡಿಸಿ ಬಿದ್ದರು
ನಿನ್ನಜ್ಜ ನನ್ನಜ್ಜ ಮುತ್ತಜ್ಜ

ತೂಕಡಿಸಿ ತೂಕಡಿಸಿ ಬೀಳದಿರು ತಮ್ಮ...

ಬದುಕನ್ನು ಎದುರಿಸಲು ಕಣ್ತೆರೆದು ನೋಡ
ಬೆದರಿಕೆಗೆ ಕೈಕಟ್ಟಿ ಹಾಳಾಗಬೇಡ
ಕೊಚ್ಚೆಯ ಹುಳುವ೦ತೆ ಕುರುಡಾಗಬೇಡ
ತೂಕಡಿಸಿ ತೂಕಡಿಸಿ ಬೀಳದಿರು ತಮ್ಮ
ನನ್ನ ತಮ್ಮ ಮ೦ಕುತಿಮ್ಮ
ತೂಕಡಿಸಿ ತೂಕಡಿಸಿ ಬಿದ್ದರು ನನ್ನಜ್ಜ ನಿನ್ನಜ್ಜ ಮುತ್ತಜ್ಜ

Wednesday, June 6, 2007

ಹಿಂದೂಸ್ಥಾನುವು ಎಂದೂ ಮರೆಯದ

ಚಿತ್ರ: ಅಮೃತ ಘಳಿಗೆ
ಸಾಹಿತ್ಯ: ವಿಜಯನಾರಸಿಂಹ
ಸಂಗೀತ: ವಿಜಯಭಾಸ್ಕರ
ಹಿನ್ನಲೆ ಗಾಯಕ: ಜಯಚಂದ್ರ


ಹಿಂದೂಸ್ಥಾನುವು ಎಂದೂ ಮರೆಯದ
ಭಾರತ ರತ್ನವು ಜನ್ಮಿಸಲಿ
ಈ ಕನ್ನಡ ಮಾತೆಯ ಮಡಿಲಲ್ಲಿ
ಈ ಕನ್ನಡ ನುಡಿಯಾ ಗುಡಿಯಲ್ಲಿ

ಧೇಶಭಕ್ತಿಯ ಬಿಸಿ ಬಿಸಿ ನೆತ್ತರು
ಧಮನಿ ಧಮನಿಯಲಿ ತುಂಬಿರಲಿ
ವಿಶ್ವಪ್ರೇಮದಾ ಶಾಂತಿ ಮಂತ್ರದ
ಘೋಷವ ಎಲ್ಲೆಡೆ ಮೋಳಗಿಸಲಿ
ಸಕಲ ಧರ್ಮದ ಸತ್ವ ಸಮನ್ವಯ
ತತ್ವ ಜ್ಯೋತಿಯ ಬೆಳಗಿಸಲಿ

ಹಿಂದೂಸ್ಥಾನುವು ಎಂದೂ ಮರೆಯದ...

ಕನ್ನಡ ತಾಯಿಯ ಕೋಮಲ ಹೃದಯದ
ಭವ್ಯ ಶಾಸನ ಬರೆಯಿಸಲಿ
ಕನ್ನಡ ನಾಡಿನ ಎದೆ ಎದೆಯಲ್ಲೂ
ಕನ್ನಡ ವಾಣಿಯ ಸ್ಥಾಪಿಸಲಿ
ಈ ಮಣ್ಣಿನ ಪುಣ್ಯದ ದಿವ್ಯ ಚರಿತ್ರೆಯ
ಕಲ್ಲು ಕಲ್ಲಿನಲೂ ಕೆತ್ತಿಸಲಿ

ಹಿಂದೂಸ್ಥಾನುವು ಎಂದೂ ಮರೆಯದ...