ರಚನೆ : ಡಾ.ದ.ರಾ.ಬೇಂದ್ರೆ
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ರಾಜಕುಮಾರ್ ಭಾರತಿ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ದಾರೀಲಿ ನೆನೆದ ಕೈ ಹಿಡಿದೆ ನೀನು ತಣ್ಣsಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲಿನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ ನಾನು ದೇವರಂತ ತಿಳಿದಿಯೇನ ನೀ ನನ್ನ
ನೀ ಹೀಂಗ ನೋಡಬ್ಯಾಡ ನನ್ನ...
ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಾoಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ ಹೆಣ್ಣ ಹೇಳು ನಿನ್ನವೇನ ಈ ಕಣ್ಣು
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ
ನೀ ಹೀಂಗ ನೋಡಬ್ಯಾಡ ನನ್ನ...
ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು ನಡ ನಡಕ ಹುಚ್ಚನಗಿ ಯಾಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡದ್ಹಾಂಗೆ ಗಾಳಿಯ ನೆವಕ
ಅತ್ತಾರೆ ಅತ್ತುಬಿಡು ಹೊನಲು ಬರಲಿ ನಕ್ಯಾಕೆ ಮರಸತೀ ದು:ಖ
ಎವೆಬಡಿಸಿ ಕೆಡವು ಬಿರಿಗಣ್ಣು ಬ್ಯಾಡ ತುಟಿಕಚ್ಚಿ ಹಿಡಿಯದಿರು ಬಿಕ್ಕ
ನೀ ಹೀಂಗ ನೋಡಬ್ಯಾಡ ನನ್ನ...
Monday, August 25, 2008
Thursday, August 7, 2008
ಶ್ರಾವಣ ಮಾಸ ಬಂದಾಗ ಆನಂದ ತಂದಾಗ
ಚಿತ್ರ: ಶ್ರಾವಣ ಬಂತು
ರಚನೆ: ಚಿ.ಉದಯಶಂಕರ್
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್ ಮತ್ತು ವಾಣಿ ಜಯರಾಮ್
ಶ್ರಾವಣ ಮಾಸ ಬಂದಾಗ ಆನಂದ ತಂದಾಗ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ನೀ ನನ್ನ ಜೊತೆಯಾಗಿ ಇರುವಾಗ ಹಿತವಾಗಿ
ಬಿಸಿಲೆಲ್ಲ ತಂಪಾಗಿ ಬೆಳದಿಂಗಳಂತಾಗಿ
ಮಾತೆಲ್ಲ ಹಾಡಾಗಿ ಆ ಹಾಡು ಇಂಪಾಗಿ
ಯುಗವೊಂದು ದಿನವಾಗಿ ಕ್ಷಣವಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ಶ್ರಾವಣ ಮಾಸ ಬಂದಾಗ ಆನಂದ ತಂದಾಗ...
ಮುಗಿಲೆಲ್ಲ ಕಪ್ಪಾಗಿ ಮಿಂಚಿಂದ ಬೆಳಕಾಗಿ
ಗುಡುಗಿಂದ ಸದ್ದಾಗಿ ಮಳೆಬಂದು ತಂಪಾಗಿ
ಸಂತೋಷ ಹೆಚ್ಚಾಗಿ ನವಿಲೊಂದು ಹುಚ್ಚಾಗಿ
ಕುಣಿದಾಗ ಸೊಗಸಾಗಿ ನಮಗಾಗ ಚಳಿಯಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ಶ್ರಾವಣ ಮಾಸ ಬಂದಾಗ ಆನಂದ ತಂದಾಗ...
ರಚನೆ: ಚಿ.ಉದಯಶಂಕರ್
ಸಂಗೀತ: ಎಂ.ರಂಗರಾವ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್ ಮತ್ತು ವಾಣಿ ಜಯರಾಮ್
ಶ್ರಾವಣ ಮಾಸ ಬಂದಾಗ ಆನಂದ ತಂದಾಗ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ನೀ ನನ್ನ ಜೊತೆಯಾಗಿ ಇರುವಾಗ ಹಿತವಾಗಿ
ಬಿಸಿಲೆಲ್ಲ ತಂಪಾಗಿ ಬೆಳದಿಂಗಳಂತಾಗಿ
ಮಾತೆಲ್ಲ ಹಾಡಾಗಿ ಆ ಹಾಡು ಇಂಪಾಗಿ
ಯುಗವೊಂದು ದಿನವಾಗಿ ಕ್ಷಣವಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ಶ್ರಾವಣ ಮಾಸ ಬಂದಾಗ ಆನಂದ ತಂದಾಗ...
ಮುಗಿಲೆಲ್ಲ ಕಪ್ಪಾಗಿ ಮಿಂಚಿಂದ ಬೆಳಕಾಗಿ
ಗುಡುಗಿಂದ ಸದ್ದಾಗಿ ಮಳೆಬಂದು ತಂಪಾಗಿ
ಸಂತೋಷ ಹೆಚ್ಚಾಗಿ ನವಿಲೊಂದು ಹುಚ್ಚಾಗಿ
ಕುಣಿದಾಗ ಸೊಗಸಾಗಿ ನಮಗಾಗ ಚಳಿಯಾಗಿ
ವಿರಹ ಗೀತೆ ಇನ್ನಿಲ್ಲ ಪ್ರಣಯ ಗೀತೆ ಬಾಳೆಲ್ಲ
ಶ್ರಾವಣ ಮಾಸ ಬಂದಾಗ ಆನಂದ ತಂದಾಗ...
Labels:
ಎಂ.ರಂಗರಾವ್,
ಚಿ.ಉದಯಶಂಕರ್,
ಚಿತ್ರ ಗೀತೆ,
ಡಾ. ರಾಜ್ ಕುಮಾರ್,
ವಾಣಿ ಜಯರಾಮ್
Sunday, August 3, 2008
ಮನಸ ಹೇಳ ಬಯಸಿದೆ... ನೂರೊಂದು
ಚಿತ್ರ: ಬೀಗರ ಪಂದ್ಯ
ರಚನೆ: ಆರ್.ಎನ್. ಜಯಗೋಪಾಲ್
ಸಂಗೀತ: ರಮೇಶ್ ನಾಯ್ಡು
ಹಿನ್ನಲೆ ಗಾಯನ: ಪಿ.ಸುಶೀಲ
ಮನಸ ಹೇಳ ಬಯಸಿದೆ... ನೂರೊಂದು
ತುಟಿಯ ಮೇಲೆ ಬಾರದಿದೆ... ಮಾತೊಂದು
ನೆನಪು ನೂರು ಎದೆಯಲಿ... ಅಗಲಿಕೆಯ ನೋವಲಿ
ವಿದಾಯ ಗೆಳೆಯನೇ... ವಿದಾಯ ಗೆಳತಿಯೇ
ವಿದಾಯ ಹೇಳ ಬಂದಿರುವೇ... ನಾನಿಂದು
ಹಗಲು ರಾತ್ರಿ... ಹಕ್ಕಿಯ ಹಾಗೇ... ಹಾರಿ ಮೆರೆದೆವು
ನಗು ಎನ್ನುವ ಅಲೆಯ ಮೇಲೆ ತೇಲಿ ನಲಿದೆವು
ಹೃದಯಗಳಾ... ಬೆಸುಗೆಯಾಗಿ
ಸ್ನೇಹ ಬಂಧ ಅಮರವಾಗಿ
ನಾಳೆ ಎನ್ನುವ ಚಿಂತೆ ಮರೆತು ಹಾಡಿ ಕುಣಿದೆವು
ಆ ಕಾಲ ಕಳೆದಿದೆ... ದೂರಾಗೋ ಸಮಯದೇ
ವಿದಾಯ ಹೇಳ ಬಂದಿರುವೇ... ನಾನಿಂದು
ಮನಸ ಹೇಳ ಬಯಸಿದೆ... ನೂರೊಂದು
ನೀನು ಬೇರೆ... ನಾನು ಬೇರೆ... ಹೇಗೋ ಬೆರೆತೆವು
ನಮ್ಮ ನಮ್ಮ ಒಪ್ಪು ತಪ್ಪು... ಎಲ್ಲಾ ಅರಿತೆವು
ಈ ದಿನವ ಮರೆಯಬೇಡ
ನಮ್ಮ ಸ್ನೇಹ ತೊರೆಯಬೇಡ
ದಾರಿ ಬೇರೆ ಆದರೇನು... ಪ್ರೀತಿ ಉಳಿಯಲಿ
ನಾನೆಲ್ಲೆ ಇದ್ದರೂ... ನೀ ಹೇಗೆ ಇದ್ದರೂ
ನೀ ನಾಳೆ ಕೇಳಬೇಡ.. ನನ್ನ ಯಾರೆಂದು
ರಚನೆ: ಆರ್.ಎನ್. ಜಯಗೋಪಾಲ್
ಸಂಗೀತ: ರಮೇಶ್ ನಾಯ್ಡು
ಹಿನ್ನಲೆ ಗಾಯನ: ಪಿ.ಸುಶೀಲ
ಮನಸ ಹೇಳ ಬಯಸಿದೆ... ನೂರೊಂದು
ತುಟಿಯ ಮೇಲೆ ಬಾರದಿದೆ... ಮಾತೊಂದು
ನೆನಪು ನೂರು ಎದೆಯಲಿ... ಅಗಲಿಕೆಯ ನೋವಲಿ
ವಿದಾಯ ಗೆಳೆಯನೇ... ವಿದಾಯ ಗೆಳತಿಯೇ
ವಿದಾಯ ಹೇಳ ಬಂದಿರುವೇ... ನಾನಿಂದು
ಹಗಲು ರಾತ್ರಿ... ಹಕ್ಕಿಯ ಹಾಗೇ... ಹಾರಿ ಮೆರೆದೆವು
ನಗು ಎನ್ನುವ ಅಲೆಯ ಮೇಲೆ ತೇಲಿ ನಲಿದೆವು
ಹೃದಯಗಳಾ... ಬೆಸುಗೆಯಾಗಿ
ಸ್ನೇಹ ಬಂಧ ಅಮರವಾಗಿ
ನಾಳೆ ಎನ್ನುವ ಚಿಂತೆ ಮರೆತು ಹಾಡಿ ಕುಣಿದೆವು
ಆ ಕಾಲ ಕಳೆದಿದೆ... ದೂರಾಗೋ ಸಮಯದೇ
ವಿದಾಯ ಹೇಳ ಬಂದಿರುವೇ... ನಾನಿಂದು
ಮನಸ ಹೇಳ ಬಯಸಿದೆ... ನೂರೊಂದು
ನೀನು ಬೇರೆ... ನಾನು ಬೇರೆ... ಹೇಗೋ ಬೆರೆತೆವು
ನಮ್ಮ ನಮ್ಮ ಒಪ್ಪು ತಪ್ಪು... ಎಲ್ಲಾ ಅರಿತೆವು
ಈ ದಿನವ ಮರೆಯಬೇಡ
ನಮ್ಮ ಸ್ನೇಹ ತೊರೆಯಬೇಡ
ದಾರಿ ಬೇರೆ ಆದರೇನು... ಪ್ರೀತಿ ಉಳಿಯಲಿ
ನಾನೆಲ್ಲೆ ಇದ್ದರೂ... ನೀ ಹೇಗೆ ಇದ್ದರೂ
ನೀ ನಾಳೆ ಕೇಳಬೇಡ.. ನನ್ನ ಯಾರೆಂದು
Thursday, July 24, 2008
ಅಮ್ಮ…ನಿನ್ನ ಎದೆಯಾಳದಲ್ಲಿ
ರಚನೆ: ಬಿ.ಆರ್.ಲಕ್ಷ್ಮಣರಾವ್
ಅಮ್ಮ…ನಿನ್ನ ಎದೆಯಾಳದಲ್ಲಿ
ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು
ಕಡಿಯಲೊಲ್ಲೆ ಈ ಕರುಳ ಬಳ್ಳಿ
ಒಲವೂಡುತಿರುವ ತಾಯೆ
ಬಿಡದ ಭುವಿಯ ಮಾಯೆ
ನಿನ್ನ ರಕ್ಷೆ ಗೂಡಲ್ಲಿ ಬೆಚ್ಚಗೆ
ಅಡಗಲಿ ಎಷ್ಟು ದಿನ ?
ದೂಡು ಹೊರಗೆ ನನ್ನ
ಓಟ ಕಲಿವೆ, ಒಳನೋಟ ಕಲಿವೆ, ನಾ
ಕಲಿವೆ ಊರ್ಧ್ವ ಗಮನ
ಓ ಅಗಾಧ ಗಗನ !
ಅಮ್ಮ…ನಿನ್ನ ಎದೆಯಾಳದಲ್ಲಿ...
ಮೇಲೆ ಹಾರಿ ನಿನ್ನ ಸೆಳೆತ ಮೀರಿ
ನಿರ್ಭಾರ ಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು
ಬಂದೇ ಬರುವೆನು
ಮತ್ತೆ ನಿನ್ನ ತೊಡೆಗೆ
ಮೂರ್ತ ಪ್ರೇಮದೆಡೆಗೆ !
ಅಮ್ಮ…ನಿನ್ನ ಎದೆಯಾಳದಲ್ಲಿ...
ಅಮ್ಮ…ನಿನ್ನ ಎದೆಯಾಳದಲ್ಲಿ
ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು
ಕಡಿಯಲೊಲ್ಲೆ ಈ ಕರುಳ ಬಳ್ಳಿ
ಒಲವೂಡುತಿರುವ ತಾಯೆ
ಬಿಡದ ಭುವಿಯ ಮಾಯೆ
ನಿನ್ನ ರಕ್ಷೆ ಗೂಡಲ್ಲಿ ಬೆಚ್ಚಗೆ
ಅಡಗಲಿ ಎಷ್ಟು ದಿನ ?
ದೂಡು ಹೊರಗೆ ನನ್ನ
ಓಟ ಕಲಿವೆ, ಒಳನೋಟ ಕಲಿವೆ, ನಾ
ಕಲಿವೆ ಊರ್ಧ್ವ ಗಮನ
ಓ ಅಗಾಧ ಗಗನ !
ಅಮ್ಮ…ನಿನ್ನ ಎದೆಯಾಳದಲ್ಲಿ...
ಮೇಲೆ ಹಾರಿ ನಿನ್ನ ಸೆಳೆತ ಮೀರಿ
ನಿರ್ಭಾರ ಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು
ಬಂದೇ ಬರುವೆನು
ಮತ್ತೆ ನಿನ್ನ ತೊಡೆಗೆ
ಮೂರ್ತ ಪ್ರೇಮದೆಡೆಗೆ !
ಅಮ್ಮ…ನಿನ್ನ ಎದೆಯಾಳದಲ್ಲಿ...
Saturday, July 19, 2008
ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಚಿತ್ರ:ಗಾಳಿ ಮಾತು
ರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಜಾನಕಿ
ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಭುವಿಯಲ್ಲೋ ಬಾನಲ್ಲೋ ಇನ್ನೆಲ್ಲೋ ನಾ ಕಾಣೇ..
ಅರಳಿರುವ ಹೂವಿನಲ್ಲೀ ನಿನ್ನ ನೋಟವಾ
ಹರಿಯುತಿಹ ನೀರಿನಲ್ಲೀ ನಿನ್ನ ಓಟವಾ
ಇಂಪಾದ ಗಾನದಲ್ಲೀ ನಿನ್ನ ಮೊಗದ ಭಾವವಾ
ಮಳೆ ಬಿಲ್ಲ ಬಣ್ಣದಲ್ಲಿ ನಿನ್ನ ಅಂದವಾ
ನವಿಲಾಡೊ ನಾಟ್ಯದಲ್ಲೀ ಚಂದವಾ
ತಂಪಾದ ಗಾಳಿಯಲ್ಲೀ ನೀನಾಡೋ ಆಟವಾ
ದಿನವೆಲ್ಲಾ ನಾ ಕಂಡೇ ನಾ ಕಂಡೂ ಬೆರೆಗಾದೆ...
ಒಮ್ಮೆ ನಿನ್ನನ್ನೂ..
ಮಿನುಗುತಿಹ ತಾರೆಯೆಲ್ಲಾ ನಿನ್ನ ಕಂಗಳೋ
ನಗುತಿರಲು ಭೂಮಿಗೆಲ್ಲಾ ಬೆಳದಿಂಗಳೋ
ಆ ಬೆಳ್ಳೀ ಮೋಡವೆಲ್ಲಾ ನೀ ಬರೆದ ಬೊಂಬೆಗಳೋ
ಮೂಡಣದ ಅಂಚಿನಿಂದಾ ನಿನ್ನ ಪಯಣವೋ
ಮುಂಜಾನೆ ಕಾಣೋ ಕೆಂಪು ಚಂದುಟಿಯ ಬಣ್ಣವೋ
ಆಗಸದ ನೀಲಿಯೆಲ್ಲಾ ನೀ ನಡೆವ ಹಾದಿಯೋ
ನಿನ್ನಂತೇ ಯಾರಿಲ್ಲಾ ನಿನ್ನಲ್ಲೇ ಮನಸೆಲ್ಲಾ...
ಒಮ್ಮೆ ನಿನ್ನನ್ನೂ..
ರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಜಾನಕಿ
ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಭುವಿಯಲ್ಲೋ ಬಾನಲ್ಲೋ ಇನ್ನೆಲ್ಲೋ ನಾ ಕಾಣೇ..
ಅರಳಿರುವ ಹೂವಿನಲ್ಲೀ ನಿನ್ನ ನೋಟವಾ
ಹರಿಯುತಿಹ ನೀರಿನಲ್ಲೀ ನಿನ್ನ ಓಟವಾ
ಇಂಪಾದ ಗಾನದಲ್ಲೀ ನಿನ್ನ ಮೊಗದ ಭಾವವಾ
ಮಳೆ ಬಿಲ್ಲ ಬಣ್ಣದಲ್ಲಿ ನಿನ್ನ ಅಂದವಾ
ನವಿಲಾಡೊ ನಾಟ್ಯದಲ್ಲೀ ಚಂದವಾ
ತಂಪಾದ ಗಾಳಿಯಲ್ಲೀ ನೀನಾಡೋ ಆಟವಾ
ದಿನವೆಲ್ಲಾ ನಾ ಕಂಡೇ ನಾ ಕಂಡೂ ಬೆರೆಗಾದೆ...
ಒಮ್ಮೆ ನಿನ್ನನ್ನೂ..
ಮಿನುಗುತಿಹ ತಾರೆಯೆಲ್ಲಾ ನಿನ್ನ ಕಂಗಳೋ
ನಗುತಿರಲು ಭೂಮಿಗೆಲ್ಲಾ ಬೆಳದಿಂಗಳೋ
ಆ ಬೆಳ್ಳೀ ಮೋಡವೆಲ್ಲಾ ನೀ ಬರೆದ ಬೊಂಬೆಗಳೋ
ಮೂಡಣದ ಅಂಚಿನಿಂದಾ ನಿನ್ನ ಪಯಣವೋ
ಮುಂಜಾನೆ ಕಾಣೋ ಕೆಂಪು ಚಂದುಟಿಯ ಬಣ್ಣವೋ
ಆಗಸದ ನೀಲಿಯೆಲ್ಲಾ ನೀ ನಡೆವ ಹಾದಿಯೋ
ನಿನ್ನಂತೇ ಯಾರಿಲ್ಲಾ ನಿನ್ನಲ್ಲೇ ಮನಸೆಲ್ಲಾ...
ಒಮ್ಮೆ ನಿನ್ನನ್ನೂ..
Labels:
ಎಸ್.ಜಾನಕಿ,
ಚಿ.ಉದಯಶಂಕರ್,
ಚಿತ್ರ ಗೀತೆ,
ರಾಜನ್-ನಾಗೇಂದ್ರ
Wednesday, July 9, 2008
ಮುಚ್ಚುಮರೆ ಇಲ್ಲದೆಯೇ
ರಚನೆ: ಕುವೆಂಪು
ಸಂಗೀತ: ಮೈಸೂರು ಅನಂತಸ್ವಾಮಿ
ಹಿನ್ನಲೆ ಗಾಯನ: ಪುಷ್ಪ ಜಗದೀಶ್
ಮುಚ್ಚುಮರೆ ಇಲ್ಲದೆಯೇ
ನಿನ್ನ ಮುಂದೆಲ್ಲವನು
ಬಿಚ್ಚಿಡುವೆ ಓ ಗುರುವೇ, ಅಂತರಾತ್ಮ
ಪಾಪವಿದೆ ಪುಣ್ಯವಿದೆ
ನರಕವಿದೆ ನಾಕವಿದೆ
ಸ್ವೀಕರಿಸು ಓ ಗುರುವೇ, ಅಂತರಾತ್ಮ
ಮುಚ್ಚುಮರೆ ಇಲ್ಲದೆಯೇ...
ರವಿಗೆ ಕಾಂತಿಯನೀವೆ ನಿನ್ನ ಕಣ್ಣೀಕ್ಷಿಸಲು
ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಂಗೆ
ನರಕ ತಾನುಳಿಯುವುದೇ ನರಕವಾಗಿ
ಮುಚ್ಚುಮರೆ ಇಲ್ಲದೆಯೇ...
ಸಾಂತರೀತಿಯೊಳೆಮ್ಮಿ ಕದಡಿರುವುದೆನ್ನಾತ್ಮ
ನಾಂತರೀತಿಯು ಅದೆಂತೋ, ಓ ಅನಂತಾ..
ನನ್ನ ರೀತಿಯ ಕುರುಡಿಂದೆನ್ನ ರಕ್ಷಿಸೈ
ನಿನ್ನ ನೀತಿಯ ಬೆಳಗಿನ ಅನಂತಕೊಯ್
ಮುಚ್ಚುಮರೆ ಇಲ್ಲದೆಯೇ...
ಸಂಗೀತ: ಮೈಸೂರು ಅನಂತಸ್ವಾಮಿ
ಹಿನ್ನಲೆ ಗಾಯನ: ಪುಷ್ಪ ಜಗದೀಶ್
ಮುಚ್ಚುಮರೆ ಇಲ್ಲದೆಯೇ
ನಿನ್ನ ಮುಂದೆಲ್ಲವನು
ಬಿಚ್ಚಿಡುವೆ ಓ ಗುರುವೇ, ಅಂತರಾತ್ಮ
ಪಾಪವಿದೆ ಪುಣ್ಯವಿದೆ
ನರಕವಿದೆ ನಾಕವಿದೆ
ಸ್ವೀಕರಿಸು ಓ ಗುರುವೇ, ಅಂತರಾತ್ಮ
ಮುಚ್ಚುಮರೆ ಇಲ್ಲದೆಯೇ...
ರವಿಗೆ ಕಾಂತಿಯನೀವೆ ನಿನ್ನ ಕಣ್ಣೀಕ್ಷಿಸಲು
ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಂಗೆ
ನರಕ ತಾನುಳಿಯುವುದೇ ನರಕವಾಗಿ
ಮುಚ್ಚುಮರೆ ಇಲ್ಲದೆಯೇ...
ಸಾಂತರೀತಿಯೊಳೆಮ್ಮಿ ಕದಡಿರುವುದೆನ್ನಾತ್ಮ
ನಾಂತರೀತಿಯು ಅದೆಂತೋ, ಓ ಅನಂತಾ..
ನನ್ನ ರೀತಿಯ ಕುರುಡಿಂದೆನ್ನ ರಕ್ಷಿಸೈ
ನಿನ್ನ ನೀತಿಯ ಬೆಳಗಿನ ಅನಂತಕೊಯ್
ಮುಚ್ಚುಮರೆ ಇಲ್ಲದೆಯೇ...
Labels:
ಕುವೆಂಪು,
ಪುಷ್ಪ ಜಗದೀಶ್,
ಭಾವ ಗೀತೆ,
ಮೈಸೂರು ಅನಂತಸ್ವಾಮಿ
Tuesday, July 8, 2008
ಸವಿನೆನಪುಗಳು ಬೇಕು ಸವಿಯಲೀ ಬದುಕು
ಚಿತ್ರ: ಅಪರಿಚಿತ
ಸಂಗೀತ: ಎಲ್. ವೈದ್ಯನಾಥನ್
ಹಿನ್ನಲೆ ಗಾಯನ: ಎಸ್. ಜಾನಕಿ
ಸವಿನೆನಪುಗಳು ಬೇಕು ಸವಿಯಲೀ ಬದುಕು
ಕಹಿನೆನಪು ಸಾಕೊಂದು ಮಾಸಲೀ ಬದುಕು
ಬೆಂಬಿಡದ ಆ ನೆನಪು ಮರುಕಳಿಸಿ ದಿನವೆಲ್ಲ
ಕಾಡುತಿದೆ ಮನವ
ಸವಿನೆನಪುಗಳು ಬೇಕು ಸವಿಯಲೀ ಬದುಕು...
ಪ್ರಿಯತಮನ ಒಲವಿಂದ ಕನಸುಗಳು ಮೂಡಿ
ಇನಿಯನ ಎದೆಗೊರಗಿ ಆಸರೆಯ ಬೇಡಿ
ಸರಸ ಸವಿಯ ಬಯಸಿದೆನು ನಾನು
ವಿರಹ ವಿಫಲ ಫಲಿಸಿದವು ನನಗೆ
ಇನಿಯನ ಎದೆ ಬಡಿತ ಗುಂಡಿನ ದನಿಗಿರಿದು
ಮಾಸುತಿದೆ ಕನಸು
ಸವಿನೆನಪುಗಳು ಬೇಕು ಸವಿಯಲೀ ಬದುಕು...
ಬೀಸುತಿಹ ತಂಗಾಳಿ ಬಿಸಿಯಾಗಿ ಕಾಡಿ
ನೆನಪಿನ ಭೀತಿಯಲಿ ನಾ ಬಂದಿಯಾಗಿ
ಮನಸು ಹೃದಯ ನೊಂದು ನೋವಾಗಿದೆ
ಒಲವು ನಲಿವು ಮೂಡಿ ಮಸುಕಾಗಿ
ಅರಳುವ ಹೂವೊಂದು ಕಮರುವ ಭಯದಲೀ
ಸಾಗುತಿದೆ ಬದುಕು
ಸವಿನೆನಪುಗಳು ಬೇಕು ಸವಿಯಲೀ ಬದುಕು...
ಸಂಗೀತ: ಎಲ್. ವೈದ್ಯನಾಥನ್
ಹಿನ್ನಲೆ ಗಾಯನ: ಎಸ್. ಜಾನಕಿ
ಸವಿನೆನಪುಗಳು ಬೇಕು ಸವಿಯಲೀ ಬದುಕು
ಕಹಿನೆನಪು ಸಾಕೊಂದು ಮಾಸಲೀ ಬದುಕು
ಬೆಂಬಿಡದ ಆ ನೆನಪು ಮರುಕಳಿಸಿ ದಿನವೆಲ್ಲ
ಕಾಡುತಿದೆ ಮನವ
ಸವಿನೆನಪುಗಳು ಬೇಕು ಸವಿಯಲೀ ಬದುಕು...
ಪ್ರಿಯತಮನ ಒಲವಿಂದ ಕನಸುಗಳು ಮೂಡಿ
ಇನಿಯನ ಎದೆಗೊರಗಿ ಆಸರೆಯ ಬೇಡಿ
ಸರಸ ಸವಿಯ ಬಯಸಿದೆನು ನಾನು
ವಿರಹ ವಿಫಲ ಫಲಿಸಿದವು ನನಗೆ
ಇನಿಯನ ಎದೆ ಬಡಿತ ಗುಂಡಿನ ದನಿಗಿರಿದು
ಮಾಸುತಿದೆ ಕನಸು
ಸವಿನೆನಪುಗಳು ಬೇಕು ಸವಿಯಲೀ ಬದುಕು...
ಬೀಸುತಿಹ ತಂಗಾಳಿ ಬಿಸಿಯಾಗಿ ಕಾಡಿ
ನೆನಪಿನ ಭೀತಿಯಲಿ ನಾ ಬಂದಿಯಾಗಿ
ಮನಸು ಹೃದಯ ನೊಂದು ನೋವಾಗಿದೆ
ಒಲವು ನಲಿವು ಮೂಡಿ ಮಸುಕಾಗಿ
ಅರಳುವ ಹೂವೊಂದು ಕಮರುವ ಭಯದಲೀ
ಸಾಗುತಿದೆ ಬದುಕು
ಸವಿನೆನಪುಗಳು ಬೇಕು ಸವಿಯಲೀ ಬದುಕು...
Labels:
ಅಪರಿಚಿತ,
ಎಲ್. ವೈದ್ಯನಾಥನ್,
ಎಸ್.ಜಾನಕಿ,
ಚಿತ್ರ ಗೀತೆ
Subscribe to:
Posts (Atom)
